ಬೆಂಗಳೂರು: ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಡೆದಿರುವ ಅಮಾನವೀಯ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ 28 ವರ್ಷದ ಮುದುಕಪ್ಪನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಘಟನೆ ವಿವರ:
ಜನವರಿ 24ರಂದು ಕಲ್ಕೆರೆ ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ 28 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿತ್ತು. ಮೃತ ನಜ್ಮಾ ಎಂಬಾಕೆ ಬಾಂಗ್ಲಾದೇಶ ಮೂಲದವರಾಗಿದ್ದು, ಮನೆಗೆಲಸ ಮಾಡುತ್ತಾ ಬದುಕು ನಡೆಸುತ್ತಿದ್ದರು. ಶವ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಕೊಲೆ ಮಾಡಿರುವುದು ದೃಢಪಟ್ಟಿದೆ.
ಅರೋಪಿಯ ಬಂಧನ ಹೇಗೆ ಸಾಧ್ಯವಾಯಿತು?
ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಮುದುಕಪ್ಪ, ನಜ್ಮಾ ವಾಸವಿದ್ದ ಶೆಡ್ ಹಾಗೂ ಆಕೆ ಕೆಲಸ ಮಾಡುತ್ತಿದ್ದ ಅಪಾರ್ಟ್ಮೆಂಟ್ಗೆ ನೀರು ಪೂರೈಸಲು ಹೋಗುತ್ತಿದ್ದ. ಈ ವೇಳೆ ಇಬ್ಬರ ನಡುವೆ ಸಂಭಾಷಣೆ ನಡೆಯುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.
ಜನವರಿ 23ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ನಜ್ಮಾವನ್ನು ಮುದುಕಪ್ಪ ಹಿಂಬಾಲಿಸಿ, ಆಕೆಯನ್ನು ಕಲ್ಕೆರೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಅಲ್ಲಿಂದಾಗಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ, ಆಕೆ ಪ್ರತಿರೋಧ ತೋರಿದಳು. ಇದರಿಂದ ಕೋಪಗೊಂಡ ಮುದುಕಪ್ಪ, ಲೈಂಗಿಕ ದೌರ್ಜನ್ಯ ಎಸಗಿ, ಉಸಿರುಗಟ್ಟಿಸಿ ಹತ್ಯೆಗೈದು, ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದ.
ಪೊಲೀಸರ ಕಾರ್ಯಾಚರಣೆ:
ಶವಪತ್ತೆಯಾದ ಬಳಿಕ ಪೊಲೀಸರು ತಕ್ಷಣವೇ ತನಿಖೆಗೆ ಮುಂದಾದರು. ಸ್ಥಳದಲ್ಲಿನ ಸಿಸಿಟಿವಿ ದೃಶ್ಯ, ಸ್ಥಳೀಯರ ಮಾಹಿತಿಗಳನ್ನ ಆಧರಿಸಿ ಪೊಲೀಸರು ಆರೋಪಿಯ ಹತ್ತಿರ ಬಂದರು. ಶಂಕಿತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ, ಅವನು ಅಪರಾಧಕ್ಕೆ ಒಪ್ಪಿಕೊಂಡನು. ಮರಣೋತ್ತರ ಪರೀಕ್ಷೆ ಮತ್ತು ಎಫ್ಎಸ್ಎಲ್ ವರದಿ ದೃಢಪಡಿಸಿದ ನಂತರ, ಪೊಲೀಸರು ಮುದುಕಪ್ಪನನ್ನು ಅಧಿಕೃತವಾಗಿ ಬಂಧಿಸಿದರು.
ಈ ಘಟನೆಯು ಮಹಿಳೆಯರ ಸುರಕ್ಷತೆ ಕುರಿತಾಗಿ ಮತ್ತೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಕಠಿಣ ಶಿಕ್ಷೆಗೆ ಒಳಗಾಗಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…