Latest

ಕಲ್ಕೆರೆ ಕೆರೆಗೆ ಸಮೀಪ ಬಾಂಗ್ಲಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ: ಆರೋಪಿ ಬಂಧನ

ಬೆಂಗಳೂರು: ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಡೆದಿರುವ ಅಮಾನವೀಯ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ 28 ವರ್ಷದ ಮುದುಕಪ್ಪನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಘಟನೆ ವಿವರ:
ಜನವರಿ 24ರಂದು ಕಲ್ಕೆರೆ ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ 28 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿತ್ತು. ಮೃತ ನಜ್ಮಾ ಎಂಬಾಕೆ ಬಾಂಗ್ಲಾದೇಶ ಮೂಲದವರಾಗಿದ್ದು, ಮನೆಗೆಲಸ ಮಾಡುತ್ತಾ ಬದುಕು ನಡೆಸುತ್ತಿದ್ದರು. ಶವ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಕೊಲೆ ಮಾಡಿರುವುದು ದೃಢಪಟ್ಟಿದೆ.

ಅರೋಪಿಯ ಬಂಧನ ಹೇಗೆ ಸಾಧ್ಯವಾಯಿತು?
ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಮುದುಕಪ್ಪ, ನಜ್ಮಾ ವಾಸವಿದ್ದ ಶೆಡ್ ಹಾಗೂ ಆಕೆ ಕೆಲಸ ಮಾಡುತ್ತಿದ್ದ ಅಪಾರ್ಟ್‌ಮೆಂಟ್‌ಗೆ ನೀರು ಪೂರೈಸಲು ಹೋಗುತ್ತಿದ್ದ. ಈ ವೇಳೆ ಇಬ್ಬರ ನಡುವೆ ಸಂಭಾಷಣೆ ನಡೆಯುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.

ಜನವರಿ 23ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ನಜ್ಮಾವನ್ನು ಮುದುಕಪ್ಪ ಹಿಂಬಾಲಿಸಿ, ಆಕೆಯನ್ನು ಕಲ್ಕೆರೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಅಲ್ಲಿಂದಾಗಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ, ಆಕೆ ಪ್ರತಿರೋಧ ತೋರಿದಳು. ಇದರಿಂದ ಕೋಪಗೊಂಡ ಮುದುಕಪ್ಪ, ಲೈಂಗಿಕ ದೌರ್ಜನ್ಯ ಎಸಗಿ, ಉಸಿರುಗಟ್ಟಿಸಿ ಹತ್ಯೆಗೈದು, ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದ.

ಪೊಲೀಸರ ಕಾರ್ಯಾಚರಣೆ:
ಶವಪತ್ತೆಯಾದ ಬಳಿಕ ಪೊಲೀಸರು ತಕ್ಷಣವೇ ತನಿಖೆಗೆ ಮುಂದಾದರು. ಸ್ಥಳದಲ್ಲಿನ ಸಿಸಿಟಿವಿ ದೃಶ್ಯ, ಸ್ಥಳೀಯರ ಮಾಹಿತಿಗಳನ್ನ ಆಧರಿಸಿ ಪೊಲೀಸರು ಆರೋಪಿಯ ಹತ್ತಿರ ಬಂದರು. ಶಂಕಿತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ, ಅವನು ಅಪರಾಧಕ್ಕೆ ಒಪ್ಪಿಕೊಂಡನು. ಮರಣೋತ್ತರ ಪರೀಕ್ಷೆ ಮತ್ತು ಎಫ್‌ಎಸ್‌ಎಲ್ ವರದಿ ದೃಢಪಡಿಸಿದ ನಂತರ, ಪೊಲೀಸರು ಮುದುಕಪ್ಪನನ್ನು ಅಧಿಕೃತವಾಗಿ ಬಂಧಿಸಿದರು.

ಈ ಘಟನೆಯು ಮಹಿಳೆಯರ ಸುರಕ್ಷತೆ ಕುರಿತಾಗಿ ಮತ್ತೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಕಠಿಣ ಶಿಕ್ಷೆಗೆ ಒಳಗಾಗಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

11 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

11 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

11 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

11 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

11 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

11 hours ago