Latest

11ನೇ ತರಗತಿಯ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ.! ಇಂಗ್ಲಿಷ್ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲು

ಮುಂಬೈ ನಗರದಲ್ಲಿ ಶಾಕ್ ನೀಡುವ ಘಟನೆ ನಡೆದಿದ್ದು, ಖ್ಯಾತ ಶಾಲೆಯ ಇಂಗ್ಲಿಷ್ ಶಿಕ್ಷಕಿಯೊಬ್ಬರು 16 ವರ್ಷದ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಗುರಿಯಾಗಿದ್ದಾರೆ. ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶಿಕ್ಷಕಿಯನ್ನು ಬಂಧಿಸಿದ್ದು, ಪೋಕ್ಸೊ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ.

ಸಂಬಂಧ ಪ್ರಾರಂಭವಾದದ್ದು ಡ್ಯಾನ್ಸ್ ಅಭ್ಯಾಸದ ವೇಳೆ

2023ರ ಡಿಸೆಂಬರ್ ತಿಂಗಳಲ್ಲಿ ಶಾಲೆಯ ವಾರ್ಷಿಕ ಸಮಾರಂಭದ ಡ್ಯಾನ್ಸ್ ಅಭ್ಯಾಸದ ವೇಳೆ ಶಿಕ್ಷಕಿಗೆ ವಿದ್ಯಾರ್ಥಿಯ ಮೇಲೆ ಭಾವನೆ ಉಂಟಾಗಿದೆ ಎನ್ನಲಾಗಿದೆ. ಈ ಕುರಿತು ಶಿಕ್ಷಕಿ ತನಿಖೆ ವೇಳೆ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. 2024ರ ಜನವರಿಯಲ್ಲಿ, ವಿದ್ಯಾರ್ಥಿಯೊಂದಿಗೆ ಪ್ರತ್ಯಕ್ಷ ಲೈಂಗಿಕ ಸನ್ನೆಗಳನ್ನು ಆರಂಭಿಸಿದ್ದಳು. ಆದರೆ ವಿದ್ಯಾರ್ಥಿ ವಿರೋಧ ವ್ಯಕ್ತಪಡಿಸಿದ್ದಾನೆ.

ಇದು ಸಾಮಾನ್ಯ” ಎಂದು ಮತ್ತೊಬ್ಬ ಮಹಿಳೆಯಿಂದ ಒತ್ತಾಯ?

ಶಿಕ್ಷಕಿ ಜೊತೆಗಿದ್ದ ಮತ್ತೊಬ್ಬ ಮಹಿಳೆ, “ವಯಸ್ಸಾದ ಮಹಿಳೆ ಹಾಗೂ ಯುವಕನ ನಡುವಿನ ಸಂಬಂಧಗಳು ಸಾಮಾನ್ಯ” ಎಂದು ಹೇಳಿ ವಿದ್ಯಾರ್ಥಿಗೆ ಒತ್ತಡ ಹೇರಿದ್ದಾರಂತೆ ಎಂಬ ಆರೋಪವೂ ಕೇಳಿಬಂದಿದೆ.

ಕಾರಿನಲ್ಲಿ ಕರೆದುಕೊಂಡು ಹೋಗಿ ದೌರ್ಜನ್ಯ

ವಿದ್ಯಾರ್ಥಿ ನೀಡಿದ ದೂರಿನ ಪ್ರಕಾರ, ಶಿಕ್ಷಕಿ ಅವನನ್ನು ತನ್ನ ಕಾರಿನಲ್ಲಿ ಏಕಾಂತ ಪ್ರದೇಶಗಳಿಗೆ ಕರೆದುಕೊಂಡು ಹೋಗಿ, ಅಲ್ಲಿಗೆ ಬಲವಂತವಾಗಿ ದೌರ್ಜನ್ಯ ಎಸಗುತ್ತಿದ್ದಳು. ಕೆಲವು ಸಂದರ್ಭಗಳಲ್ಲಿ, ವಿದ್ಯಾರ್ಥಿಗೆ ತೀವ್ರ ಆತಂಕ ಉಂಟಾಗುತ್ತಿದ್ದುದರಿಂದ, ಶಿಕ್ಷಕಿ ಆತಂಕ ನಿವಾರಕ ಮಾತ್ರೆಗಳನ್ನೂ ನೀಡಿ ಇತರೆ ಅನೈತಿಕ ಕ್ರಿಯೆಗಳಲ್ಲಿ ತೊಡಗುತ್ತಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೋಟೆಲ್‌ಗಳಲ್ಲಿ ಹಿಂಸೆ

ಮಾತ್ರ ಇಷ್ಟು ಮಾತ್ರವಲ್ಲ, ಪಂಚತಾರಾ ಹೋಟೆಲ್‌ಗಳಿಗೆ ಕರೆದುಕೊಂಡು ಹೋಗಿ, ಅಲ್ಲಿಯೂ ಲೈಂಗಿಕ ಹಿಂಸೆ ಮುಂದುವರಿಸಿದ್ದಾಳೆ ಎಂಬ ಗಂಭೀರ ಆರೋಪ ವಿದ್ಯಾರ್ಥಿಯಿಂದ ಕೇಳಿಬಂದಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಶಾಲಾ ಆಡಳಿತ ಕೂಡ ಶಾಕ್ ಆಗಿದ್ದು, ಸಹಕರಿಸುತ್ತಿರುವುದಾಗಿ ತಿಳಿಸಿದೆ.

ಈ ಘಟನೆ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಭದ್ರತೆ ಕುರಿತು ಮತ್ತೊಂದು ಪ್ರಮುಖ ಚಿಂತನೆಯ ವಿಷಯವನ್ನೇ ಎಬ್ಬಿಸಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

5 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

11 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

11 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago