ಅಪ್ರಾಪ್ತ ಬಾಲಕಿ ವಿದ್ಯಾರ್ಥಿ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಪಾವಗಡದ ಸಾಸಲುಕುಂಟೆಯಲ್ಲಿ ನಡೆದಿದೆ. ಪಿ. ನಾಗಭೂಷಣ್ ಆರೋಪಿ ಶಿಕ್ಷಕನಾಗಿದ್ದು, ಬಡಗನಹಳ್ಳಿ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಹತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ ನಾಗಭೂಷಣ್ ದೌರ್ಜನ್ಯ ಎಸೆಗಿದ್ದು, ಈ ಕುರಿತು ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿದ ಡಿಡಿಪಿಐ ಎಂ.ಆರ್. ಮಂಜುನಾಥ್ ನಾಗಭೂಷಣ್ ರನ್ನು ಅಮಾನತುಗೊಳಿಸಿದ್ದರು. ಈ ಹಿಂದೆ ಮಧುಗಿರಿ ಶಾಲೆಯಲ್ಲಿಯೂ ಈತ ವಿದ್ಯಾರ್ಥಿನಿಯೊಬ್ಬಳೊಡನೆ ಕರ್ತ್ಯವ್ಯದ ವೇಳೆ ಅನುಚಿತವಾಗಿ ವರ್ತಿಸಿದ ಆರೋಪ ಹೊಂದಿದ್ದ. ಅವನನ್ನು ಅಲ್ಲಿಂದ ವರ್ಗಾವಣೆ ಮಾಡಲಾಗಿತ್ತಾದರೂ ಯಾವುದೇ ಪ್ರಕರಣ ದಾಖಲಿಸಿರಲಿಲ್ಲ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…