ಬೆಂಗಳೂರು ಮಹಾನಗರ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬ ಮಾತಿಗೆ ಮೈಲಸಂದ್ರದಲ್ಲಿ ನಡೆದಿದೆ ಎನ್ನಲಾಗುವ ಘಟನೆ ಮತ್ತೊಮ್ಮೆ ದೃಢಪಡಿಸಿದೆ. ನಗರದ ಆನೇಕಲ್ ತಾಲೂಕು ವ್ಯಾಪ್ತಿಯ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಭಾನುವಾರ (ಜೂನ್ 23) ಮಧ್ಯಾಹ್ನ ನಡೆದ ಈ ಕೃತ್ಯದಲ್ಲಿ, ಗಾಂಜಾ ಮತ್ತು ಮದ್ಯದ ನಶೆಯಲ್ಲಿ ತಿರುಗಾಡುತ್ತಿದ್ದ ಐದರಿಂದ ಆರು ಯುವಕರ ಗುಂಪು ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊರವಿದೆ.
ಪ್ರಾಥಮಿಕ ಮಾಹಿತಿಯಂತೆ, ಅಂಗಡಿಗೆ ತೆರಳುತ್ತಿದ್ದ ಯುವತಿಯನ್ನು ಮಧ್ಯರಸ್ತೆಯಲ್ಲೇ ತಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಯುವತಿಯ ಮೈ ಕೈ ಮುಟ್ಟಿ ದೌರ್ಜನ್ಯಕ್ಕೆ ಮುಂದಾಗಿದ್ದಾರೆ. ಯುವತಿ ತೀವ್ರವಾಗಿ ಪ್ರತಿರೋಧ ವ್ಯಕ್ತಪಡಿಸಿದಾಗ, ಆಕೆಯ ಮೇಲೆ ಹಲ್ಲೆ ನಡೆಸಿದ ಗೂಂಡಾ ಗುಂಪು, ನಂತರ ಆಕೆಯ ಮನೆಯವರೆಗೂ ಹಿಂಬಾಲಿಸಿ ಬಡಿದರೆಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಘಟನೆಯ ನಂತರ ಆತಂಕಗೊಂಡ ಯುವತಿ ಸಮೀಪದ ಮನೆಗೆ ಓಡಿ ಅಲ್ಲಿ ಆಶ್ರಯ ಪಡೆದರೂ, ಆರೋಪಿಗಳ ಗುಂಪು ಆ ಮನೆಯವರೆಗೂ ನುಗ್ಗಿ ಗಲಾಟೆ ನಡೆಸಿದ ವರದಿ ಬಂದಿದೆ.
ಈ ಕುರಿತಂತೆ ಯುವತಿ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣದ ಮೇಲೆ ಅಧಿಕಾರಿಗಳು ಗಂಭೀರವಾಗಿ ಗಮನಹರಿಸಿ, ಆರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆಗೆ ಸಂಬಂಧಿಸಿದ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಪೊಲೀಸರು ಇದೀಗ ಆರೋಪಿಗಳ ಪತ್ತೆಗಾಗಿ ದಾಳಿ ಆರಂಭಿಸಿದ್ದಾರೆ. ಸ್ಥಳೀಯ ನಿವಾಸಿಗಳು ಕೂಡ ಈ ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದು, ಮಹಿಳೆಯರ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…