ಶಿವಮೊಗ್ಗ: ವೈದ್ಯೆ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಡಾ. ಅಶ್ವಿನ್ ಹೆಬ್ಬಾರ್, ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರು ವಿದ್ಯಾರ್ಥಿನಿಯೊಬ್ಬರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ, ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಡಾ. ಹೆಬ್ಬಾರ್ ಪರಾರಿಯಾಗಿದ್ದರು. ಘಟನೆಯ ವಿರುದ್ಧ ವೈದ್ಯ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟಿಸಿದರು. ಲಾಯರ್ಸ್ ಗೀಲ್ಡ್ ಕೂಡ ಆಕ್ರೋಶ ವ್ಯಕ್ತಪಡಿಸಿ ವೈದ್ಯರನ್ನು ತಕ್ಷಣ ಬಂಧಿಸಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿತು.
ತೀವ್ರಗತಿಯಲ್ಲಿ ತನಿಖೆ ನಡೆಸಿದ ಮಹಿಳಾ ಠಾಣೆ ಪೊಲೀಸರು, ಕರಾವಳಿ ಭಾಗದ ದೇವಾಲಯವೊಂದರ ಬಳಿ ಲುಕಾಯಿಸಿಕೊಂಡಿದ್ದ ಡಾ. ಅಶ್ವಿನ್ ಹೆಬ್ಬಾರ್ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಇದೀಗ ಅವರನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಮುಂದುವರಿದಿದ್ದು, ನ್ಯಾಯಕ್ಕಾಗಿ ವಿದ್ಯಾರ್ಥಿನಿಗೆ ಸಮರ್ಪಕ ನ್ಯಾಯ ದೊರೆಯಲಿದೆ ಎಂಬ ನಿರೀಕ್ಷೆಯಿದೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಐ ಶ್ಕಾಂತರಾಜ್.ಕೆ ರವರು ಇದೇ ತಿಂಗಳ ಜೂನ್ 26 ರಂದು ಸಂಜೆ ಸಮಯ ಠಾಣೆಯಲ್ಲಿದ್ದಾಗ…
ಹೊನ್ನಾವರ: ಮಹಿಳೆಯರ ಗೌರವ ಮತ್ತು ಗೌಪ್ಯತೆ ಕಡೆಗಣಿಸುವ ಆತ್ಮಹೀನ ಕೃತ್ಯವೊಂದು ಹೊನ್ನಾವರದಲ್ಲಿ ಬೆಳಕಿಗೆ ಬಂದಿದೆ. ಸ್ನಾನ ಮಾಡುವ ಮಹಿಳೆಯನ್ನೇ ಇಣುಕಿ…
ಧಾರವಾಡ: ನಗರದ ಹಳೆ ಕೋರ್ಟ್ ವೃತ್ತದ ಬಳಿ ಆಘಾತಕಾರಿ ಘಟನೆ ಒಂದರಲ್ಲಿ, ಕಂಠಪೂರ್ತಿ ಮದ್ಯಪಾನ ಮಾಡಿಕೊಂಡು ಆಟೋ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು…
ಹುಬ್ಬಳ್ಳಿ, ಜೂನ್ 27 – ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ನಡೆದ ಸಂಯುಕ್ತ ತಪಾಸಣೆಯಲ್ಲಿ ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗಿದೆ.…
ಬೆಂಗಳೂರು: ಕರ್ನಾಟಕ ಬಿಜೆಪಿ ಶಿಬಿರದಲ್ಲಿ ಆಂತರಿಕ ಬಿಕ್ಕಟ್ಟು ಮತ್ತಷ್ಟು ಗಂಭೀರ ಸ್ವರೂಪ ಪಡೆಯುತ್ತಿದ್ದು, ನಾಯಕತ್ವದ ವಿರುದ್ ಸಮಾಧಾನ ದಿನದಿಂದ ದಿನಕ್ಕೆ…
ಮಂಗಳೂರು: ವಿವಾದಾತ್ಮಕ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರಮುಖ…