ಶಿವಮೊಗ್ಗ: ವೈದ್ಯೆ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಡಾ. ಅಶ್ವಿನ್ ಹೆಬ್ಬಾರ್, ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರು ವಿದ್ಯಾರ್ಥಿನಿಯೊಬ್ಬರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ, ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಡಾ. ಹೆಬ್ಬಾರ್ ಪರಾರಿಯಾಗಿದ್ದರು. ಘಟನೆಯ ವಿರುದ್ಧ ವೈದ್ಯ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟಿಸಿದರು. ಲಾಯರ್ಸ್ ಗೀಲ್ಡ್ ಕೂಡ ಆಕ್ರೋಶ ವ್ಯಕ್ತಪಡಿಸಿ ವೈದ್ಯರನ್ನು ತಕ್ಷಣ ಬಂಧಿಸಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿತು.
ತೀವ್ರಗತಿಯಲ್ಲಿ ತನಿಖೆ ನಡೆಸಿದ ಮಹಿಳಾ ಠಾಣೆ ಪೊಲೀಸರು, ಕರಾವಳಿ ಭಾಗದ ದೇವಾಲಯವೊಂದರ ಬಳಿ ಲುಕಾಯಿಸಿಕೊಂಡಿದ್ದ ಡಾ. ಅಶ್ವಿನ್ ಹೆಬ್ಬಾರ್ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಇದೀಗ ಅವರನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಮುಂದುವರಿದಿದ್ದು, ನ್ಯಾಯಕ್ಕಾಗಿ ವಿದ್ಯಾರ್ಥಿನಿಗೆ ಸಮರ್ಪಕ ನ್ಯಾಯ ದೊರೆಯಲಿದೆ ಎಂಬ ನಿರೀಕ್ಷೆಯಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…