ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಶಾಲಾ ಮುಖ್ಯಶಿಕ್ಷಕನಿಗೆ ಗ್ರಾಮಸ್ಥರೇ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಖಾಸಗಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ನರೇಂದ್ರ ಎಂಬಾತನ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಪದೇ ಪದೇ ತನ್ನ ಕಚೇರಿಗೆ ಕರೆದು ಕಸ ಗುಡಿಸುವಂತೆ ಹೇಳುತ್ತಿದ್ದನು. ಕಸ ಗುಡಿಸಲು ಬಂದಾಗ ವಿದ್ಯಾರ್ಥಿನಿಯೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಅಲ್ಲದೆ ಮುಖ್ಯಶಿಕ್ಷಕನಿಂದ ಇತ್ತೀಚೆಗೆ ವಿದ್ಯಾರ್ಥಿನಿಗೆ ಬಲವಂತದಿಂದ ಚುಂಬಿಸಲು ಯತ್ನಿಸಿದ್ದು, ಇದರಿಂದ ಹೆದರಿದ ವಿದ್ಯಾರ್ಥಿನಿ ತನ್ನ ತಾಯಿಗೆ ಹಾಗೂ ದೊಡ್ಡಪ್ಪನ ಮಗನಿಗೆ ವಿಷಯವನ್ನು ತಿಳಿಸಿದ್ದಳು. ನಂತರ ಪೋಷಕರು ಪೊಲೀಸರ ಬಳಿ ತೆರಳಿ ಮಾಹಿತಿ ತಿಳಿಸಿದ್ದು, ಪೊಲೀಸರು ವಿಚಾರಣೆಗಾಗಿ ಬರ ಹೇಳಿದಾಗ ಶಿಕ್ಷಕ ಒಪ್ಪದ ಕಾರಣ, ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ವಿದ್ಯಾರ್ಥಿನಿ ಹಾಗೂ ಆಕೆಯ ಸಂಬಂಧಿಕರು ಪೊಲೀಸ್ ಠಾಣೆಗೆ ಬಾರದ ಹಿನ್ನಲೆ ಬೇಲೂರು ವೃತ್ತ ನಿರೀಕ್ಷಕ ರವಿಕಿರಣ್, ಪಿಎಸ್ಐ ಎಸ್.ಜಿ.ಪಾಟೀಲ್ ತಾವೇ ವಿದ್ಯಾರ್ಥಿನಿಯ ಮನೆಗೆ ತೆರಳಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿ ಆರೋಪಿ ಶಿಕ್ಷಕನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಇನ್ನು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ವಿದ್ಯಾ ಸಂಸ್ಥೆಯು ಕೂಡ ಮುಖ್ಯಶಿಕ್ಷಕ ನರೇಂದ್ರನನ್ನು ಅಮಾನತು ಮಾಡಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…