Latest

ಯುವತಿಗೆ ಲೈಂಗಿಕ ಕಿರುಕುಳ: ಕಾಮುಕರಿಗಾಗಿ ಬಾಣಸವಾಡಿ ಪೊಲೀಸರ ಶೋಧ

ಬೆಂಗಳೂರು: ಮುಂಜಾನೆ ಕ್ಯಾಬ್ ಬುಕ್ ಮಾಡಿದ ಯುವತಿ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಬಳಿಕ ಪರಾರಿಯಾಗಿರುವ ಇಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಘಟನೆ ವಿವರ

ಜಾನುವರಿ 27ರ ಮುಂಜಾನೆ 2 ಗಂಟೆ ಸುಮಾರಿಗೆ, ಕಮನಹಳ್ಳಿಯಿಂದ ವೈಟ್‌ಫೀಲ್ಡ್‌ಗೆ ತೆರಳಲು ಯುವತಿಯೊಬ್ಬರು ಕ್ಯಾಬ್ ಬುಕ್ ಮಾಡಿದ್ದರು. ಕ್ಯಾಬ್ ಸ್ಥಳಕ್ಕೆ ಬಂದ ತಕ್ಷಣ, ಆಕೆ ಒಳಗೆ ಸೇರುತ್ತಿದ್ದಂತೆಯೇ ಇಬ್ಬರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಕಾರಿಗೆ ನುಗ್ಗಿ ಆಕೆಯ ಪಕ್ಕದಲ್ಲೇ ಕುಳಿತುಕೊಂಡಿದ್ದಾರೆ.

ಯುವತಿ ಆತಂಕಗೊಂಡು ಕಾರಿನಿಂದ ಇಳಿದು ಓಡಲು ಪ್ರಯತ್ನಿಸಿದರೂ, ಕಾಮುಕರು ಆಕೆಯನ್ನು ಹಿಂಬಾಲಿಸಿ ಜಗ್ಗಾಡಿದ್ದಾರೆ. ಲೈಂಗಿಕ ಕಿರುಕುಳ ನೀಡಲು ಮುಂದಾದಾಗ, ಆತಂಕಗೊಂಡ ಯುವತಿ ಜೋರಾಗಿ ಕಿರುಚಿಕೊಂಡಿದ್ದಾರೆ. ಆಕೆಯ ಚಿರಾಟ ಕೇಳಿದ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನು ಗಮನಿಸಿದ ಇಬ್ಬರು ಆರೋಪಿತರು ಅಲ್ಲಿಂದ ಪರಾರಿಯಾಗಿದ್ದಾರೆ.

ಪೊಲೀಸರು ಶೋಧ ಆರಂಭ

ಘಟನೆಯ ಕುರಿತು ತಕ್ಷಣವೇ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಯುವತಿ, ತನ್ನ ಮೇಲಾದ ಹಲ್ಲೆಯ ಬಗ್ಗೆ ವಿವರ ನೀಡಿದ್ದಾರೆ. ಸದ್ಯ, ಪೊಲೀಸರು ಆರೋಪಿತರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ.

ನಿರಪರಾಧ ಮಹಿಳೆಯರ ಸುರಕ್ಷತೆಗೆ ಭಂಗ ತರುವ ಈ ರೀತಿಯ ಘಟನೆಗಳನ್ನು ತಡೆಗಟ್ಟಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾರ್ವಜನಿಕರು ಸಹ ಮಾಹಿತಿ ನೀಡಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕೋರಲಾಗಿದೆ.

nazeer ahamad

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

13 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

18 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

18 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

18 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

18 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

18 hours ago