Latest

ಹಣ ಡಬಲ್ ಮಾಡುವ ನೆಪದಲ್ಲಿ ಲಕ್ಷಾಂತರ ರೂ ಮೋಸ: ವಂಚಿಸಿದ ಶಬ್ಬೀರ ಬಂಧನ.

ಭಟ್ಕಳ: ಹಣವನ್ನು ಡಬಲ್ ಮಾಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣವೊಂದು ಮುರುಡೇಶ್ವರದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಭಟ್ಕಳದ ಗುಳ್ಮೆಯ ಬಿಲಾಲಖಂಡ ನಿವಾಸಿ ಮೊಹಮದ್ ಶಬ್ಬೀರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮುರಡೇಶ್ವರದ ಮಾವಳ್ಳಿ ಬಳಿ ವಾಸವಾಗಿರುವ ಮತ್ತು ಗುತ್ತಿಗೆ ಕೆಲಸ ಮಾಡಿಕೊಂಡಿರುವ ಮಂಜುನಾಥ ನಾಯ್ಕ ಎಂಬವರು ಈ ಮೋಸದ ಬಲಿಯಾದರು. ಪೇಂಟಿಂಗ್ ಕೆಲಸ ಮಾಡುತ್ತಿರುವ ಶಬ್ಬೀರ, ಮಂಜುನಾಥ ನಾಯ್ಕರಿಗೆ ಹಣ ಡಬಲ್ ಮಾಡುವ “ಸೌದಾ”ಯೊಂದನ್ನು ಪ್ರಸ್ತಾಪಿಸಿದ್ದರು. ಶಬ್ಬೀರನ ಮಾತಿಗೆ ನಂಬಿಕೆ ಇಟ್ಟುಕೊಂಡ ನಾಯ್ಕರು, ತಮ್ಮ ಹಗಲು-ರಾತ್ರಿ ದುಡಿದು ಸಂಪಾದಿಸಿದ 3.25 ಲಕ್ಷ ರೂಪಾಯಿಯನ್ನು ನೀಡಿದರು.

ಮೇ 27ರಂದು ಮೊದಲ ಹಂತದಲ್ಲಿ 2.10 ಲಕ್ಷ ಹಾಗೂ ಮೇ 29ರಂದು ಮತ್ತೊಮ್ಮೆ 1.15 ಲಕ್ಷ ರೂಪಾಯಿ ಹಣವನ್ನು ಶಬ್ಬೀರ ಸ್ವೀಕರಿಸಿದರು. ಆದರೆ ಹಣವನ್ನು ಡಬಲ್ ಮಾಡಿ ಹಿಂತಿರುಗಿಸುವುದರಲ್ಲಿ ವಿಫಲರಾದ ಮಾತ್ರವಲ್ಲದೆ, ನೀಡಿದ ಹಣವನ್ನೂ ಮರಳಿಸದೆ ಕಿರುಕುಳ ನೀಡಲು ಆರಂಭಿಸಿದರು. ಇದರಿಂದ ಮನನೊಂದು ಮಂಜುನಾಥ ನಾಯ್ಕ ಅವರು ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದರು.

ದೂರು ಸ್ವೀಕರಿಸಿದ ಪೊಲೀಸರು, ಆಂಜಿನೇಯ ದೇವಸ್ಥಾನ ಹತ್ತಿರ ಹಣ ಹಸ್ತಾಂತರದ ಬಗ್ಗೆ ದೊರೆತ ದಾಖಲೆಗಳ ಆಧಾರದ ಮೇಲೆ ತನಿಖೆ ಕೈಗೊಂಡರು. ಉತ್ತರ ಕನ್ನಡ ಜಿಲ್ಲಾ ಎಸ್‌ಪಿ ಎಂ. ನಾರಾಯಣ, ಹೆಚ್ಚುವರಿ ಎಸ್‌ಪಿ ಕೃಷ್ಣಮೂರ್ತಿ ಹಾಗೂ ಜಗದೀಶ ಎಂ ಅವರು ಡಿವೈಎಸ್‌ಪಿ ಮಹೇಶ್ ಎಂ ಅವರ ನೇತೃತ್ವದಲ್ಲಿ ಸಮೀಕ್ಷೆ ನಡೆಸಿದರು.

ಪಿಎಸ್‌ಐ ಹಣಮಂತ ಬೀರಾದರ್ ನೇತೃತ್ವದ ತಂಡ, ಶಬ್ಬೀರನನ್ನು ಪತ್ತೆಹಚ್ಚಿ ಬಂಧಿಸಲು ಯಶಸ್ವಿಯಾಯಿತು. ಬಂಧನದ ವೇಳೆ ಶಬ್ಬೀರನಿಂದ 50 ಸಾವಿರ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಮಂಜುನಾಥ ಲಕ್ಮಾಪುರ, ವಿಜಯ ನಾಯ್ಕ, ಮಂಜುನಾಥ ಮಡಿವಾಳ, ಸಿದ್ದಪ್ಪ ಕಾಂಬಳೆ, ಪರೀದ್ ಚಿಗರಳ್ಳಿ ಹಾಗೂ ಲೋಕಪ್ಪ ಕತ್ತಿ ಅವರು ಭಾಗವಹಿಸಿದ್ದರು. ವರದಿ: ಕುಮಾರ್ ನಾಯ್ಕ.

nazeer ahamad

Recent Posts

ಆಯರಹಳ್ಳಿ ಹೊಳೆಯಲ್ಲಿ ತಲೆಹರಿತ ಶವಭಾಗ ಪತ್ತೆ – ಮೈಸೂರು ಜಿಲ್ಲೆಯಲ್ಲಿ ರಹಸ್ಯಮಯ ಮರಣದ ವಿಚಾರಣೆ

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದಲ್ಲಿ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ…

6 hours ago

ಹುಲಸೂರ ಬಳಿ ಹೋರಿಗಳ ಸಾಗಣೆ ತಡೆ: ದಾಖಲೆ ಇಲ್ಲದಿದ್ದರೆ ಕಾನೂನು ಕ್ರಮ ಎಚ್ಚರಿಕೆ..!

ಬಸವಕಲ್ಯಾಣಕ್ಕೆ ಹೋರಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದ ಘಟನೆಯೊಂದು ಶನಿವಾರ ಹುಲಸೂರ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ. ಗಡಿಗೌಡಗಾಂವ ಗ್ರಾಮದ ರೈತನಿಗೆ…

6 hours ago

ಹುಬ್ಬಳ್ಳಿ-ಧಾರವಾಡದಲ್ಲಿ ರೌಡಿಗಳ ಆಟಕ್ಕೆ ಬ್ರೇಕ್: ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಪೊಲೀಸರು

ಹುಬ್ಬಳ್ಳಿ-ಧಾರವಾಡದಲ್ಲಿ ಭಯ ಹುಟ್ಟಿಸುತ್ತಿದ್ದ ರೌಡಿಶಾಹಿಗೆ ಕಡಿವಾಣ ಹಾಕಲು ಪೊಲೀಸರು ಕೈಗೊಳ್ಳುತ್ತಿರುವ ಕ್ರಮಗಳು ಇದೀಗ ಗಂಭೀರ ರೂಪ ಪಡೆದಿವೆ.ಹುಬ್ಬಳ್ಳಿ-ಧಾರವಾಡದಲ್ಲಿ ಅಪರಾಧದ ಪ್ರಮಾಣ…

7 hours ago

ಶಿಗ್ಗಾಂವಿಯಲ್ಲಿ ವಾಕರಸಾಸಂ ಬಸ್ ಅಪಘಾತ: 23 ಪ್ರಯಾಣಿಕರಿಗೆ ಗಂಭೀರ ಗಾಯ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಯಾನಕ ಬಸ್ ಅಪಘಾತದಲ್ಲಿ 23 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ವಾಯುವ್ಯ…

8 hours ago

ಟ್ರೇಡಿಂಗ್ ಲಾಭದ ಆಮಿಷ: ಯುವತಿ ₹4.92 ಲಕ್ಷ ವಂಚನೆಗೆ ಬಲಿ

ಉಡುಪಿ, ಜೂನ್ 6: ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂಬ ಆಮಿಷ ನೀಡಿ ಯುವತಿಯನ್ನು ಲಕ್ಷಾಂತರ ರೂ. ವಂಚಿಸಿರುವ ಘಟನೆ…

10 hours ago

ಚಂದಾಪುರ ಸೂಟ್‌ಕೇಸ್‌ ಹತ್ಯೆ ಪ್ರಕರಣದಲ್ಲಿ 7 ಆರೋಪಿಗಳ ಬಂಧನ: ಬಿಹಾರದಲ್ಲಿ ಪೊಲೀಸರ ತುರ್ತು ಕಾರ್ಯಾಚರಣೆ

ಬೆಂಗಳೂರು, ಜೂನ್ 7: ಬೆಂಗಳೂರು ಹೊರವಲಯದ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಮೇ 21 ರಂದು ಪತ್ತೆಯಾಗಿದ್ದ ಬಾಲಕಿಯ ಹತ್ಯೆ…

12 hours ago