Latest

ಹಣ ಡಬಲ್ ಮಾಡುವ ನೆಪದಲ್ಲಿ ಲಕ್ಷಾಂತರ ರೂ ಮೋಸ: ವಂಚಿಸಿದ ಶಬ್ಬೀರ ಬಂಧನ.

ಭಟ್ಕಳ: ಹಣವನ್ನು ಡಬಲ್ ಮಾಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣವೊಂದು ಮುರುಡೇಶ್ವರದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಭಟ್ಕಳದ ಗುಳ್ಮೆಯ ಬಿಲಾಲಖಂಡ ನಿವಾಸಿ ಮೊಹಮದ್ ಶಬ್ಬೀರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮುರಡೇಶ್ವರದ ಮಾವಳ್ಳಿ ಬಳಿ ವಾಸವಾಗಿರುವ ಮತ್ತು ಗುತ್ತಿಗೆ ಕೆಲಸ ಮಾಡಿಕೊಂಡಿರುವ ಮಂಜುನಾಥ ನಾಯ್ಕ ಎಂಬವರು ಈ ಮೋಸದ ಬಲಿಯಾದರು. ಪೇಂಟಿಂಗ್ ಕೆಲಸ ಮಾಡುತ್ತಿರುವ ಶಬ್ಬೀರ, ಮಂಜುನಾಥ ನಾಯ್ಕರಿಗೆ ಹಣ ಡಬಲ್ ಮಾಡುವ “ಸೌದಾ”ಯೊಂದನ್ನು ಪ್ರಸ್ತಾಪಿಸಿದ್ದರು. ಶಬ್ಬೀರನ ಮಾತಿಗೆ ನಂಬಿಕೆ ಇಟ್ಟುಕೊಂಡ ನಾಯ್ಕರು, ತಮ್ಮ ಹಗಲು-ರಾತ್ರಿ ದುಡಿದು ಸಂಪಾದಿಸಿದ 3.25 ಲಕ್ಷ ರೂಪಾಯಿಯನ್ನು ನೀಡಿದರು.

ಮೇ 27ರಂದು ಮೊದಲ ಹಂತದಲ್ಲಿ 2.10 ಲಕ್ಷ ಹಾಗೂ ಮೇ 29ರಂದು ಮತ್ತೊಮ್ಮೆ 1.15 ಲಕ್ಷ ರೂಪಾಯಿ ಹಣವನ್ನು ಶಬ್ಬೀರ ಸ್ವೀಕರಿಸಿದರು. ಆದರೆ ಹಣವನ್ನು ಡಬಲ್ ಮಾಡಿ ಹಿಂತಿರುಗಿಸುವುದರಲ್ಲಿ ವಿಫಲರಾದ ಮಾತ್ರವಲ್ಲದೆ, ನೀಡಿದ ಹಣವನ್ನೂ ಮರಳಿಸದೆ ಕಿರುಕುಳ ನೀಡಲು ಆರಂಭಿಸಿದರು. ಇದರಿಂದ ಮನನೊಂದು ಮಂಜುನಾಥ ನಾಯ್ಕ ಅವರು ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದರು.

ದೂರು ಸ್ವೀಕರಿಸಿದ ಪೊಲೀಸರು, ಆಂಜಿನೇಯ ದೇವಸ್ಥಾನ ಹತ್ತಿರ ಹಣ ಹಸ್ತಾಂತರದ ಬಗ್ಗೆ ದೊರೆತ ದಾಖಲೆಗಳ ಆಧಾರದ ಮೇಲೆ ತನಿಖೆ ಕೈಗೊಂಡರು. ಉತ್ತರ ಕನ್ನಡ ಜಿಲ್ಲಾ ಎಸ್‌ಪಿ ಎಂ. ನಾರಾಯಣ, ಹೆಚ್ಚುವರಿ ಎಸ್‌ಪಿ ಕೃಷ್ಣಮೂರ್ತಿ ಹಾಗೂ ಜಗದೀಶ ಎಂ ಅವರು ಡಿವೈಎಸ್‌ಪಿ ಮಹೇಶ್ ಎಂ ಅವರ ನೇತೃತ್ವದಲ್ಲಿ ಸಮೀಕ್ಷೆ ನಡೆಸಿದರು.

ಪಿಎಸ್‌ಐ ಹಣಮಂತ ಬೀರಾದರ್ ನೇತೃತ್ವದ ತಂಡ, ಶಬ್ಬೀರನನ್ನು ಪತ್ತೆಹಚ್ಚಿ ಬಂಧಿಸಲು ಯಶಸ್ವಿಯಾಯಿತು. ಬಂಧನದ ವೇಳೆ ಶಬ್ಬೀರನಿಂದ 50 ಸಾವಿರ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಮಂಜುನಾಥ ಲಕ್ಮಾಪುರ, ವಿಜಯ ನಾಯ್ಕ, ಮಂಜುನಾಥ ಮಡಿವಾಳ, ಸಿದ್ದಪ್ಪ ಕಾಂಬಳೆ, ಪರೀದ್ ಚಿಗರಳ್ಳಿ ಹಾಗೂ ಲೋಕಪ್ಪ ಕತ್ತಿ ಅವರು ಭಾಗವಹಿಸಿದ್ದರು. ವರದಿ: ಕುಮಾರ್ ನಾಯ್ಕ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

6 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

6 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

6 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

6 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

6 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

6 hours ago