Latest

ಹಣ ಡಬಲ್ ಮಾಡುವ ನೆಪದಲ್ಲಿ ಲಕ್ಷಾಂತರ ರೂ ಮೋಸ: ವಂಚಿಸಿದ ಶಬ್ಬೀರ ಬಂಧನ.

ಭಟ್ಕಳ: ಹಣವನ್ನು ಡಬಲ್ ಮಾಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣವೊಂದು ಮುರುಡೇಶ್ವರದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಭಟ್ಕಳದ ಗುಳ್ಮೆಯ ಬಿಲಾಲಖಂಡ ನಿವಾಸಿ ಮೊಹಮದ್ ಶಬ್ಬೀರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಮುರಡೇಶ್ವರದ ಮಾವಳ್ಳಿ ಬಳಿ ವಾಸವಾಗಿರುವ ಮತ್ತು ಗುತ್ತಿಗೆ ಕೆಲಸ ಮಾಡಿಕೊಂಡಿರುವ ಮಂಜುನಾಥ ನಾಯ್ಕ ಎಂಬವರು ಈ ಮೋಸದ ಬಲಿಯಾದರು. ಪೇಂಟಿಂಗ್ ಕೆಲಸ ಮಾಡುತ್ತಿರುವ ಶಬ್ಬೀರ, ಮಂಜುನಾಥ ನಾಯ್ಕರಿಗೆ ಹಣ ಡಬಲ್ ಮಾಡುವ “ಸೌದಾ”ಯೊಂದನ್ನು ಪ್ರಸ್ತಾಪಿಸಿದ್ದರು. ಶಬ್ಬೀರನ ಮಾತಿಗೆ ನಂಬಿಕೆ ಇಟ್ಟುಕೊಂಡ ನಾಯ್ಕರು, ತಮ್ಮ ಹಗಲು-ರಾತ್ರಿ ದುಡಿದು ಸಂಪಾದಿಸಿದ 3.25 ಲಕ್ಷ ರೂಪಾಯಿಯನ್ನು ನೀಡಿದರು.

ಮೇ 27ರಂದು ಮೊದಲ ಹಂತದಲ್ಲಿ 2.10 ಲಕ್ಷ ಹಾಗೂ ಮೇ 29ರಂದು ಮತ್ತೊಮ್ಮೆ 1.15 ಲಕ್ಷ ರೂಪಾಯಿ ಹಣವನ್ನು ಶಬ್ಬೀರ ಸ್ವೀಕರಿಸಿದರು. ಆದರೆ ಹಣವನ್ನು ಡಬಲ್ ಮಾಡಿ ಹಿಂತಿರುಗಿಸುವುದರಲ್ಲಿ ವಿಫಲರಾದ ಮಾತ್ರವಲ್ಲದೆ, ನೀಡಿದ ಹಣವನ್ನೂ ಮರಳಿಸದೆ ಕಿರುಕುಳ ನೀಡಲು ಆರಂಭಿಸಿದರು. ಇದರಿಂದ ಮನನೊಂದು ಮಂಜುನಾಥ ನಾಯ್ಕ ಅವರು ಮುರುಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದರು.

ದೂರು ಸ್ವೀಕರಿಸಿದ ಪೊಲೀಸರು, ಆಂಜಿನೇಯ ದೇವಸ್ಥಾನ ಹತ್ತಿರ ಹಣ ಹಸ್ತಾಂತರದ ಬಗ್ಗೆ ದೊರೆತ ದಾಖಲೆಗಳ ಆಧಾರದ ಮೇಲೆ ತನಿಖೆ ಕೈಗೊಂಡರು. ಉತ್ತರ ಕನ್ನಡ ಜಿಲ್ಲಾ ಎಸ್‌ಪಿ ಎಂ. ನಾರಾಯಣ, ಹೆಚ್ಚುವರಿ ಎಸ್‌ಪಿ ಕೃಷ್ಣಮೂರ್ತಿ ಹಾಗೂ ಜಗದೀಶ ಎಂ ಅವರು ಡಿವೈಎಸ್‌ಪಿ ಮಹೇಶ್ ಎಂ ಅವರ ನೇತೃತ್ವದಲ್ಲಿ ಸಮೀಕ್ಷೆ ನಡೆಸಿದರು.

ಪಿಎಸ್‌ಐ ಹಣಮಂತ ಬೀರಾದರ್ ನೇತೃತ್ವದ ತಂಡ, ಶಬ್ಬೀರನನ್ನು ಪತ್ತೆಹಚ್ಚಿ ಬಂಧಿಸಲು ಯಶಸ್ವಿಯಾಯಿತು. ಬಂಧನದ ವೇಳೆ ಶಬ್ಬೀರನಿಂದ 50 ಸಾವಿರ ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಮಂಜುನಾಥ ಲಕ್ಮಾಪುರ, ವಿಜಯ ನಾಯ್ಕ, ಮಂಜುನಾಥ ಮಡಿವಾಳ, ಸಿದ್ದಪ್ಪ ಕಾಂಬಳೆ, ಪರೀದ್ ಚಿಗರಳ್ಳಿ ಹಾಗೂ ಲೋಕಪ್ಪ ಕತ್ತಿ ಅವರು ಭಾಗವಹಿಸಿದ್ದರು. ವರದಿ: ಕುಮಾರ್ ನಾಯ್ಕ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago