Categories: CrimeLatest

ಗಂಡನ ಸ್ನೇಹಿತನೊಂದಿಗೆ ಶಬನಂ ಅಕ್ರಮ ಸಂಬಂಧ; ಪತ್ನಿ–ಸ್ನೇಹಿತನನ್ನು ಗುಂಡಿಕ್ಕಿ ಕೊಂದ ಪತಿ

ಉತ್ತರ ಪ್ರದೇಶದ ಘಾಜಿಯಾಬಾದ್‌ನ ಟ್ರೋನಿಕಾ ಸಿಟಿಯಲ್ಲಿ ದಾರುಣ ಘಟನೆ ನಡೆದಿದ್ದು, ಪತ್ನಿ ಹಾಗೂ ಆಪ್ತ ಸ್ನೇಹಿತನ ನಡುವೆ ಅಕ್ರಮ ಸಂಬಂಧವಿದೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬ ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

38 ವರ್ಷದ ರಶೀದ್, ತನ್ನ ಪತ್ನಿ ಶಬನಂ ಹಾಗೂ ಸ್ನೇಹಿತ ಫಹೀಮ್ ನಡುವೆ ಕಳೆದ ಎರಡು ವರ್ಷಗಳಿಂದ ಸಂಬಂಧವಿದೆ ಎಂದು ಅನುಮಾನಿಸುತ್ತಿದ್ದ. ಪತ್ನಿ ತನ್ನನ್ನು ಬಿಟ್ಟು ಹೋಗಲು ಯೋಜಿಸುತ್ತಿದ್ದಾಳೆ ಎಂಬ ಮಾಹಿತಿ ತಿಳಿದ ನಂತರ ಅವನ ಆಕ್ರೋಶ ಹೆಚ್ಚಾಗಿತ್ತು.

ಸೋಮವಾರ ಸಂಜೆ ರಶೀದ್, ಫಹೀಮ್‌ನನ್ನು ಊಟಕ್ಕೆ ಮನೆಗೆ ಆಹ್ವಾನಿಸಿದ್ದ. ಮೂವರೂ ಒಟ್ಟಿಗೆ ಊಟ ಮಾಡಿ, ನಂತರ ಸಿಗರೇಟ್ ಸೇದಿದ್ದಾರೆ. ಬಳಿಕ ರಶೀದ್ ಬೆಡ್‌ರೂಮ್‌ನಲ್ಲಿದ್ದ ಕಪಾಟಿನಿಂದ ಪಿಸ್ತೂಲ್ ತೆಗೆದುಕೊಂಡು, ಮೊದಲು ಫಹೀಮ್‌ಗೆ ಹಾಗೂ ನಂತರ ಪತ್ನಿ ಶಬನಂಗೆ ಹತ್ತಿರದಿಂದ ತಲೆಗೆ ಗುಂಡು ಹಾರಿಸಿದ್ದಾನೆ. ಈ ಭೀಕರ ದೃಶ್ಯವನ್ನು ದಂಪತಿಯ 7 ವರ್ಷದ ಮಗ ಕಣ್ಣಾರೆ ಕಂಡಿದ್ದಾನೆ.

ಕೊಲೆ ಮಾಡಿದ ಬಳಿಕ, ಮಗನಿಗೆ ‘ಈಗ ಎಲ್ಲವೂ ಸರಿ ಆಗುತ್ತದೆ’ ಎಂದು ಹೇಳಿ ರಶೀದ್ ಸ್ಥಳದಿಂದ ಪರಾರಿಯಾಗಿದ್ದಾನೆ. ನೆರೆಹೊರೆಯವರು ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಿದರೂ, ಅವರು ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.

ಫಹೀಮ್ ತಂದೆಯ ದೂರಿನ ಮೇರೆಗೆ, ಪೊಲೀಸರು ರಶೀದ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಶೀದ್‌ಗೆ ಪಿಸ್ತೂಲ್ ಎಲ್ಲಿಂದ ಸಿಕ್ಕಿತು ಎಂಬುದರ ಕುರಿತೂ ತನಿಖೆ ನಡೆಯುತ್ತಿದೆ.

ತನಿಖೆಯಲ್ಲಿ ರಶೀದ್ ಮತ್ತು ಫಹೀಮ್ ಇಬ್ಬರಿಗೂ ಕ್ರಿಮಿನಲ್ ಹಿನ್ನೆಲೆ ಇರುವುದು ಬಹಿರಂಗವಾಗಿದೆ. ಫಹೀಮ್ ವಿರುದ್ಧ ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಿದ್ದು, ರಶೀದ್ ಕೂಡ ಹಿಂದೆ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದನು.

ಈ ದಂಪತಿಗೆ ಏಳು ಮಕ್ಕಳು ಇದ್ದು, ಹಿರಿಯ ಮಗನ ಮದುವೆಯ ನಂತರವೇ ಈ ಅಕ್ರಮ ಸಂಬಂಧದ ವಿಚಾರ ಬೆಳಕಿಗೆ ಬಂದಿತ್ತು. ಅದರಿಂದಲೇ ಮನೆಯಲ್ಲಿನ ಕಲಹ ಹೆಚ್ಚಾಗಿತ್ತು. ಹಲವು ಬಾರಿ ಎಚ್ಚರಿಕೆ ನೀಡಿದರೂ ಸಂಬಂಧ ಮುಂದುವರಿದಿದ್ದು, ಕೊನೆಗೆ ಈ ದಾರುಣ ಘಟನೆಗೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

12 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

19 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

19 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago