Categories: CorruptionLatest

‘ಶಕ್ತಿ’ ಯೋಜನೆ ದುರುಪಯೋಗ: ಬಿಎಂಟಿಸಿ ಐವರು ನಿರ್ವಾಹಕರು ಅಮಾನತು

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಯನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ Bangalore Metropolitan Transport Corporation (ಬಿಎಂಟಿಸಿ)ಯ ಐವರು ನಿರ್ವಾಹಕರನ್ನು ಅಮಾನತು ಮಾಡಲಾಗಿದೆ.

ಪುರುಷ ಪ್ರಯಾಣಿಕರಿಗೆ ಉಚಿತ ಪ್ರಯಾಣ ಟಿಕೆಟ್ ನೀಡಿದಂತೆ ತೋರಿಸಿ, ವಾಸ್ತವದಲ್ಲಿ ಟಿಕೆಟ್ ದರವನ್ನು ತಮ್ಮ ವೈಯಕ್ತಿಕ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚನೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅಮಾನತುಗೊಂಡವರಲ್ಲಿ ಎನ್. ಪ್ರಕಾಶ್, ಬ್ರಿಜೇಶ್ ಬಾಬು, ಬೊಮ್ಮಲಿಂಗೇಶ್ ಪಿ., ಮೋಹನ್ ಕೆ. ಮತ್ತು ಸೂರ್ಯನಾರಾಯಣ ಟಿ. ಸೇರಿದ್ದಾರೆ.

ಬಿಎಂಟಿಸಿಯಿಂದ ನಿರ್ವಾಹಕರಿಗೆ ಅಧಿಕೃತ ಡೈನಾಮಿಕ್ ಯುಪಿಐ ಕ್ಯೂಆರ್ ಕೋಡ್‌ಗಳನ್ನು ಒದಗಿಸಲಾಗಿದ್ದರೂ, ಈ ಸಿಬ್ಬಂದಿ ತಮ್ಮದೇ ವೈಯಕ್ತಿಕ ಯುಪಿಐ ಸ್ಕ್ಯಾನರ್‌ಗಳನ್ನು ಬಳಸಿ ಪ್ರಯಾಣಿಕರಿಂದ ಹಣ ಸಂಗ್ರಹಿಸುತ್ತಿದ್ದರು. ತಪಾಸಣಾ ತಂಡದ ಪರಿಶೀಲನೆಯ ವೇಳೆ ಈ ಅಕ್ರಮ ಪತ್ತೆಯಾಗಿದೆ.

ದುರುಪಯೋಗದ ಮೊತ್ತವೂ ಬಹಿರಂಗವಾಗಿದ್ದು, 39ನೇ ಘಟಕದ ಎನ್. ಪ್ರಕಾಶ್ ₹6,312, 6ನೇ ಘಟಕದ ಬ್ರಿಜೇಶ್ ಬಾಬು ₹9,795, 18ನೇ ಘಟಕದ ಬೊಮ್ಮಲಿಂಗೇಶ್ ಪಿ. ₹16,404, ಮೋಹನ್ ಕೆ. ₹6,117 ಮತ್ತು ಸೂರ್ಯನಾರಾಯಣ ಟಿ. ₹6,117 ದುರುಪಯೋಗಪಡಿಸಿಕೊಂಡಿರುವುದು ಕಂಡುಬಂದಿದೆ.

ಈ ಪ್ರಕರಣದ ಮುಂದಿನ ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಿಸಿದ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago