ಬಸವನ ಬಾಗೇವಾಡಿ: ತಾಲ್ಲೂಕಿನ ಹೂವಿನ ಹಿಪ್ಪರಗಿ ಗ್ರಾಮ ಪಂಚಾಯಿತಿಯಲ್ಲಿ ಜನವರಿ 26ರಂದು 76ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಿತು. ಆದರೆ, ಈ ದಿನಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸರ್ಕಲ್ಗೆ ಪೂಜೆ ಮಾಡದೇ, ಮಾಲಾರ್ಪಣೆ ಮಾಡದೇ ಅವಮಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅಕ್ಕಪಕ್ಕದ ಎಲ್ಲಾ ಸರ್ಕಲ್ಗಳಿಗೆ ಪೂಜೆ ಮತ್ತು ಮಾಲಾರ್ಪಣೆ ಮಾಡಿದ್ದು, ಗಾಂಧಿ ಸರ್ಕಲ್ಗೆ ಪೂಜೆ ಸಲ್ಲಿಸಿರುವುದನ್ನು ದಲಿತ ಮುಖಂಡರು ಒಪ್ಪಿಕೊಂಡರೂ, ಅಂಬೇಡ್ಕರ್ ಸರ್ಕಲ್ಗೆ ಪೂಜೆ ಮಾಡದಿರುವ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ಈ ಘಟನೆ ದಲಿತ ಮುಖಂಡರ ಆಕ್ರೋಶಕ್ಕೆ ಕಾರಣವಾಯಿತು.
ನಿನ್ನೆ ಹೂವಿನ ಹಿಪ್ಪರಗಿ ರಸ್ತೆ ತಡೆದು ದಲಿತ ಮುಖಂಡರು ಬೃಹತ್ ಪ್ರತಿಭಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ, ಬೆಳಗ್ಗಿನಿಂದಲೇ ಆರಂಭವಾದ ಪ್ರತಿಭಟನೆ ಮಧ್ಯಾಹ್ನ 4 ಗಂಟೆಯವರೆಗೆ ಮುಂದುವರಿಯಿತು. ಈ ವೇಳೆ, ಗ್ರಾಮ ಪಂಚಾಯಿತಿಯ ಪಿಡಿಓ ಅವರು ಸ್ಥಳಕ್ಕೆ ಆಗಮಿಸಿ ಅಂಬೇಡ್ಕರ್ ಮೂರ್ತಿಗೆ ಹಾರ ಹಾಕಿದ ನಂತರ ದಲಿತ ಮುಖಂಡರು ಪ್ರತಿಭಟನೆ ಹಿಂತೆಗೆದುಕೊಂಡರು.
ಪ್ರತಿಭಟನೆ ನಂತರ, ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಅವರ ಬಳಿ ದಲಿತ ಮುಖಂಡರು ಗ್ರಾಮ ಪಂಚಾಯಿತಿಯ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ಪ್ರತಿಭಟನೆಯಲ್ಲಿ ದಲಿತ ಮುಖಂಡರು ಗಂಗಾಧರ ಇಂಗಳೇಶ್ವರ, ಸಿದ್ದು ಮೇಟಿ, ಚಂದ್ರಶೇಖರ ಲಿಂಗದಳ್ಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ವರದಿ: ಸಂಗಪ್ಪ ಚಲವಾದಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…