Categories: Latest

ಅಂಬೇಡ್ಕರ್‌ಗೆ ಅವಮಾನ: ಹೂ, ಹಿಪ್ಪರಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ದಲಿತ ಮುಖಂಡರ ಆಕ್ರೋಶ

ಬಸವನ ಬಾಗೇವಾಡಿ: ತಾಲ್ಲೂಕಿನ ಹೂವಿನ ಹಿಪ್ಪರಗಿ ಗ್ರಾಮ ಪಂಚಾಯಿತಿಯಲ್ಲಿ ಜನವರಿ 26ರಂದು 76ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಿತು. ಆದರೆ, ಈ ದಿನಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸರ್ಕಲ್‌ಗೆ ಪೂಜೆ ಮಾಡದೇ, ಮಾಲಾರ್ಪಣೆ ಮಾಡದೇ ಅವಮಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಕ್ಕಪಕ್ಕದ ಎಲ್ಲಾ ಸರ್ಕಲ್‌ಗಳಿಗೆ ಪೂಜೆ ಮತ್ತು ಮಾಲಾರ್ಪಣೆ ಮಾಡಿದ್ದು, ಗಾಂಧಿ ಸರ್ಕಲ್‌ಗೆ ಪೂಜೆ ಸಲ್ಲಿಸಿರುವುದನ್ನು ದಲಿತ ಮುಖಂಡರು ಒಪ್ಪಿಕೊಂಡರೂ, ಅಂಬೇಡ್ಕರ್ ಸರ್ಕಲ್‌ಗೆ ಪೂಜೆ ಮಾಡದಿರುವ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ಈ ಘಟನೆ ದಲಿತ ಮುಖಂಡರ ಆಕ್ರೋಶಕ್ಕೆ ಕಾರಣವಾಯಿತು.

ನಿನ್ನೆ ಹೂವಿನ ಹಿಪ್ಪರಗಿ ರಸ್ತೆ ತಡೆದು ದಲಿತ ಮುಖಂಡರು ಬೃಹತ್ ಪ್ರತಿಭಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ, ಬೆಳಗ್ಗಿನಿಂದಲೇ ಆರಂಭವಾದ ಪ್ರತಿಭಟನೆ ಮಧ್ಯಾಹ್ನ 4 ಗಂಟೆಯವರೆಗೆ ಮುಂದುವರಿಯಿತು. ಈ ವೇಳೆ, ಗ್ರಾಮ ಪಂಚಾಯಿತಿಯ ಪಿಡಿಓ ಅವರು ಸ್ಥಳಕ್ಕೆ ಆಗಮಿಸಿ ಅಂಬೇಡ್ಕರ್‌ ಮೂರ್ತಿಗೆ ಹಾರ ಹಾಕಿದ ನಂತರ ದಲಿತ ಮುಖಂಡರು ಪ್ರತಿಭಟನೆ ಹಿಂತೆಗೆದುಕೊಂಡರು.

ಪ್ರತಿಭಟನೆ ನಂತರ, ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಅವರ ಬಳಿ ದಲಿತ ಮುಖಂಡರು ಗ್ರಾಮ ಪಂಚಾಯಿತಿಯ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಪ್ರತಿಭಟನೆಯಲ್ಲಿ ದಲಿತ ಮುಖಂಡರು ಗಂಗಾಧರ ಇಂಗಳೇಶ್ವರ, ಸಿದ್ದು ಮೇಟಿ, ಚಂದ್ರಶೇಖರ ಲಿಂಗದಳ್ಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ವರದಿ: ಸಂಗಪ್ಪ ಚಲವಾದಿ

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

16 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

21 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

21 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

21 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

21 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago