Latest

ಸ್ವಾತಂತ್ರ್ಯ ದಿನಾಚರಣೆಯಂದು ಅಂಬೇಡ್ಕರ್ ರವರಿಗೆ ಅವಮಾನ; ರೊಚ್ಚಿಗೆದ್ದ ಅಂಬೇಡ್ಕರ್ ಅಭಿಮಾನಿಗಳು!

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ನಾಗರಾಳ ಗ್ರಾಮದ ಶಾಲಾ ಮತ್ತು ಕಾಲೇಜುಗಳಲ್ಲಿ ದಿನಾಂಕ 15-08-2022 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೆ ಅವಮಾನ ಉಂಟು ಮಾಡಿದ್ದಾರೆ. ಭಾರತ ದೇಶಕ್ಕೆ ಅಂಬೇಡ್ಕರ್ ರವರ ಕೊಡುಗೆಯನ್ನು ಅರಿಯದ ಶಿಕ್ಷಕರು ಮತ್ತು ಅಧಿಕಾರಿ ವರ್ಗದವರು ಇಂತಹ ಕೆಲಸ ಮಾಡಿದ್ದಾರೆ. ಅಂಬೇಡ್ಕರ್ ರವರ ಬಗ್ಗೆ ಮಕ್ಕಳಿಗೆ ಬೋಧಿಸ ಬೇಕಾದಂತಹ ಶಿಕ್ಷಕರೇ ತಮ್ಮ ಶಾಲೆಗಳಲ್ಲಿ ಈ ರೀತಿ ಮಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಈ ವಿಚಾರವನ್ನು ತಿಳಿದ ಕೆಲ ದಲಿತ ಪರ ಸಂಘಟನೆಗಳು ಹಾಗೂ ಅಂಬೇಡ್ಕರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುವುದಲ್ಲದೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡದೆ ಅವಮಾನಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಪರ ಸಂಘಟನೆ ಹಾಗೂ ಅಂಬೇಡ್ಕರ್ ಅಭಿಮಾನಿಗಳು ಅಂಬೇಡ್ಕರ್ ರವರ ಬಗ್ಗೆ ಅರಿತು ಅವರಿಗೆ ನೀಡಬೇಕಾದ ಗೌರವವನ್ನು ಶಾಲಾ ಕಾಲೇಜು, ಸರಕಾರಿ ಕಚೇರಿ ಮತ್ತು ಎಲ್ಲೆಡೆ ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆಂದು ಹೇಳಿಕೆ ನೀಡುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ವರದಿ: ಅಶೋಕ ಗುರಕೇರ

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

6 days ago