ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ನಾಗರಾಳ ಗ್ರಾಮದ ಶಾಲಾ ಮತ್ತು ಕಾಲೇಜುಗಳಲ್ಲಿ ದಿನಾಂಕ 15-08-2022 ರಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡದೆ ಅವಮಾನ ಉಂಟು ಮಾಡಿದ್ದಾರೆ. ಭಾರತ ದೇಶಕ್ಕೆ ಅಂಬೇಡ್ಕರ್ ರವರ ಕೊಡುಗೆಯನ್ನು ಅರಿಯದ ಶಿಕ್ಷಕರು ಮತ್ತು ಅಧಿಕಾರಿ ವರ್ಗದವರು ಇಂತಹ ಕೆಲಸ ಮಾಡಿದ್ದಾರೆ. ಅಂಬೇಡ್ಕರ್ ರವರ ಬಗ್ಗೆ ಮಕ್ಕಳಿಗೆ ಬೋಧಿಸ ಬೇಕಾದಂತಹ ಶಿಕ್ಷಕರೇ ತಮ್ಮ ಶಾಲೆಗಳಲ್ಲಿ ಈ ರೀತಿ ಮಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ. ಈ ವಿಚಾರವನ್ನು ತಿಳಿದ ಕೆಲ ದಲಿತ ಪರ ಸಂಘಟನೆಗಳು ಹಾಗೂ ಅಂಬೇಡ್ಕರ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುವುದಲ್ಲದೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡದೆ ಅವಮಾನಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಪರ ಸಂಘಟನೆ ಹಾಗೂ ಅಂಬೇಡ್ಕರ್ ಅಭಿಮಾನಿಗಳು ಅಂಬೇಡ್ಕರ್ ರವರ ಬಗ್ಗೆ ಅರಿತು ಅವರಿಗೆ ನೀಡಬೇಕಾದ ಗೌರವವನ್ನು ಶಾಲಾ ಕಾಲೇಜು, ಸರಕಾರಿ ಕಚೇರಿ ಮತ್ತು ಎಲ್ಲೆಡೆ ನೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆಂದು ಹೇಳಿಕೆ ನೀಡುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ವರದಿ: ಅಶೋಕ ಗುರಕೇರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…