ದೇವದುರ್ಗ: ಶಾವಂತಗೇರಾ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಪ್ರಭಾರದಲ್ಲಿದ್ದ ಗ್ರೇಡ್-2 ಕಾರ್ಯದರ್ಶಿ ಶಂಶುದ್ದೀನ್ ಅವರನ್ನು ಕರ್ತವ್ಯ ಲೋಪ ಮತ್ತು ಕಾರ್ಯನಿರ್ವಹಣೆಯಲ್ಲಿ ತೋರಿದ ನಿರ್ಲಕ್ಷ್ಯಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿದೆ.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಅವರು ಬುಧವಾರ ಈ ಸಂಬಂಧ ಆದೇಶ ಹೊರಡಿಸಿದ್ದು, 2024-25 ಮತ್ತು 2025-26ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸಂಬಂಧಿತ ಬಿಲ್ ಪಾವತಿಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕ ನಾಗರಿಕ ಸೇವಾ ನಿಯಮಗಳಂತೆ ಇಲಾಖಾ ತನಿಖೆಗೆ ಅಧೀನಪಡಿಸಿ ಶಂಶುದ್ದೀನ್ ಅವರನ್ನು ಅಮಾನತು ಮಾಡುವ ಮೂಲಕ ಅಧಿಕಾರಿಗಳ ಕರ್ತವ್ಯ ನಿಷ್ಠೆಗೆ ತಕ್ಕಂತಹ ಸಂದೇಶ ನೀಡಲಾಗಿದೆ.

ಈ ಕುರಿತು ಸ್ಥಳೀಯ ಮಟ್ಟದಲ್ಲಿ ಚರ್ಚೆ ಮುಂದುವರಿದಿದ್ದು, ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹಗಳು ವ್ಯಕ್ತವಾಗುತ್ತಿವೆ.

Leave a Reply

Your email address will not be published. Required fields are marked *

Related News

error: Content is protected !!