Categories: CorruptionLatest

ಶಾಸಕರು ಬದಲಾದರೂ ಬದಲಾಗದ ಶೆಟ್ಟರ್ ದರ್ಬಾರ್? ಬಿಟಿಡಿಎ ಕಚೇರಿಯಲ್ಲಿ ಸಂತ್ರಸ್ತರ ಆಕ್ರೋಶ

ಬಾಗಲಕೋಟೆ ನಗರದಲ್ಲಿ ಸರ್ಕಾರಿ ಕಚೇರಿಗಳ ಕಾರ್ಯವೈಖರಿ ಹಾಗೂ ಖಾಸಗಿ ವ್ಯಕ್ತಿಗಳ ಹಸ್ತಕ್ಷೇಪದ ಬಗ್ಗೆ ಸಾರ್ವಜನಿಕರ ಅಸಮಾಧಾನ ಮತ್ತೊಮ್ಮೆ ಹೊರಹೊಮ್ಮಿದೆ. ಬಿಟಿಡಿಎ (BTDA) ಕಚೇರಿಯಲ್ಲಿ ನಡೆದ ಸಭೆಯೊಂದರಲ್ಲಿ ಸಂತ್ರಸ್ತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಚರ್ಚೆಗೆ ಗ್ರಾಸವಾಗಿದೆ.

ಸ್ಥಳೀಯರ ಆರೋಪದ ಪ್ರಕಾರ, ಮಾಜಿ ಶಾಸಕ ದಿವಂಗತ ಹೆಚ್.ವೈ. ಮೇಟಿ ಅವರ ಅವಧಿಯಿಂದಲೂ ಹಲವು ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಕಡತ ಮುಂದುವರಿಯಬೇಕಾದರೂ ಅಥವಾ ಆಡಳಿತಾತ್ಮಕ ಪ್ರಕ್ರಿಯೆಗಳು ನಡೆಯಬೇಕಾದರೂ ಹೊಳಬಸು ಶೆಟ್ಟರ್ ಎಂಬ ಖಾಸಗಿ ವ್ಯಕ್ತಿಯ ಪ್ರಭಾವವಿದೆ ಎಂಬ ಮಾತು ಕೇಳಿಬರುತ್ತಿತ್ತು.

ಉಪಚುನಾವಣೆಯ ಬಳಿಕ ಉಮೇಶ್ ಮೇಟಿ ಅವರು ಶಾಸಕರಾಗಿ ಅಧಿಕಾರ ಸ್ವೀಕರಿಸಿದ್ದರೂ, ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳ ಹಸ್ತಕ್ಷೇಪ ಕಡಿಮೆಯಾಗಿಲ್ಲ ಎಂಬ ಆರೋಪಗಳು ಈಗಲೂ ಕೇಳಿಬರುತ್ತಿವೆ. ಇದೇ ಹಿನ್ನೆಲೆದಲ್ಲಿ ನಿನ್ನೆ ನಡೆದ ಬಿಟಿಡಿಎ ಸಭೆಯಲ್ಲಿ ಸಂತ್ರಸ್ತರ ತಾಳ್ಮೆ ಮೀರಿದ್ದು, ಅಧ್ಯಕ್ಷರ ಸಮ್ಮುಖದಲ್ಲೇ ಅಧಿಕಾರಿಗಳ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಇದ್ದರೂ, ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳ ಪ್ರಭಾವ ಏಕೆ ಮುಂದುವರಿಯುತ್ತಿದೆ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಎತ್ತಿದ್ದಾರೆ. ತಮ್ಮ ಹಕ್ಕಿನ ಕೆಲಸಗಳಿಗಾಗಿ ಜನರು ಕಚೇರಿಗಳಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಅಧಿಕಾರಿಗಳು ಸಾರ್ವಜನಿಕ ಸೇವೆಗೆ ಬದ್ಧರಾಗಿರಬೇಕೇ ಹೊರತು ಯಾವುದೇ ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಒಳಗಾಗಬಾರದು” ಎಂದು ಸಂತ್ರಸ್ತರು ಒತ್ತಾಯಿಸಿದ್ದಾರೆ.

ಬಿಟಿಡಿಎ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳ ಹಸ್ತಕ್ಷೇಪದ ಕುರಿತು ಶಾಸಕ ಉಮೇಶ್ ಮೇಟಿ ಅವರು ತಕ್ಷಣ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

12 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

12 hours ago