10 ಸಾವಿರ ರೂ. ಲಂಚ ಪಡೆಯುವ ವೇಳೆ ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ ವಿಭಾಗದ ವ್ಯವಸ್ಥಾಪಕ ಸಿದ್ದೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ (ಅಕೌಂಟ್) ವಿಭಾಗದ ವ್ಯವಸ್ಥಾಪಕ ಸಿದ್ದೇಶ್ ಲೋಕಾಯುಕ್ತರ ದಾಳಿಯಲ್ಲಿ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನಿಂದ ಲಂಚ ಪಡೆಯುವ ವೇಳೆ ಅವರು ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಭದ್ರಾವತಿ ಮೂಲದ ಗುತ್ತಿಗೆದಾರ ಸುನೀಲ್ ಎಂಬವರು ₹3 ಲಕ್ಷದ ಕೆಲಸವನ್ನು ಮುಗಿಸಿಕೊಂಡು ಬಿಲ್ ಪಾವತಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಬಿಲ್ ಸಂಸ್ಕರಣೆಗೆ ಸಿದ್ದೇಶ್ ₹12,000 ಲಂಚವನ್ನು ಬೇಡಿದ್ದರು. ಇಂದು ಕಚೇರಿಯಲ್ಲಿಯೇ ₹10,000 ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆಸಿ ಅವರನ್ನು ಬಂಧಿಸಿದರು.
ಸ್ಥಳದಲ್ಲಿ ಸಿದ್ದೇಶ್ ಅವರನ್ನು ಗುರುತಿಸಲಾಗಿದ್ದು, ಅವರು ಲೆಕ್ಕ ವಿಭಾಗದಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಈ ದಾಳಿಯಲ್ಲಿ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ, ಇನ್ಸ್ಪೆಕ್ಟರ್ಗಳಾದ ಸುರೇಶ್ ಮತ್ತು ಪ್ರಕಾಶ್ ಸೇರಿದಂತೆ ಸಿಬ್ಬಂದಿ ತಂಡವು ಭಾಗವಹಿಸಿತು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…