ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿದ್ದ ಐಆರ್ಬಿ ಕಂಪನಿಯ ಎಂಟು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯದ ಆದೇಶ ಹೊರಡಿಸಿದರೂ ಮೌನವಾಗಿರುವ ಪೊಲೀಸರ ವಿರುದ್ಧ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. ಅಂಕೋಲಾ ಪೊಲೀಸ ಠಾಣೆ ಎದುರು ಅವರು ಮಂಗಳವಾರ ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಬ್ರಹ್ಮರ್ಷಿ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಆಕ್ರೋಶದ ಬೆನ್ನಲ್ಲೆ ಪೊಲೀಸರು ಐಆರ್ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿದರು. `ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿ 24 ದಿನ ಕಳೆದರೂ ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ’ ಎಂದು ಸ್ವಾಮೀಜಿ ಅಸಮಧಾನ ವ್ಯಕ್ತಪಡಿಸಿದರು.
ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ದೊರೆತಿಲ್ಲ. ಅವೈಜ್ಞಾನಿಕ ಕಾಮಗಾರಿ ಕೈಗೊಂಡು ಗುಡ್ಡ ಕುಸಿತಕ್ಕೆ ಕಾರಣವಾಗಿದ್ದ ಐಆರ್ಬಿ ಕಂಪನಿ ವಿರುದ್ಧ ಕ್ರಮವಾಗಿಲ್ಲ. ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಮೆಟ್ಟಿಲೇರಿದರು ಅವರು ಸ್ಪಂದಿಸಿಲ್ಲ. ಆದ್ದರಿಂದ ನ್ಯಾಯಾಲಯದ ಮೊರೆ ಹೋದೆವು. ಅಲ್ಲಿ ಐಆರ್ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸುವಂತೆ ಆದೇಶ ನೀಡಿದ್ದರೂ ಯಾವುದೇ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ’ ಎಂದು ಮಾಧ್ಯಮದ ಎದುರು ವಿವರಿಸಿದರು.
ಹಿಂದುಳಿದ ವರ್ಗದ ಮುಖ್ಯಮಂತ್ರಿ ಎನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂದು ಹೇಳಿಕೊಳ್ಳುವ ಗೃಹಮಂತ್ರಿ ಜಿ ಪರಮೇಶ್ವರ ಅವರಿಂದಲೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಅಸಾಧ್ಯವೇ? ಎಂದು ಪ್ರಶ್ನಿಸಿದರು. `ನ್ಯಾಯಾಲಯದ ಅದೇಶದಿಂದ ಗುಡ್ಡ ಕುಸಿತ ಪ್ರಕರಣದಲ್ಲಿ ನೋಂದವರಿಗೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿದೆ. ಶಿರೂರು ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರಿಗೆ ನ್ಯಾಯ ಕೊಡಿಸಿಯೇ ತಿರುತ್ತೇನೆ’ ಎಂದು ಘೋಷಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…