Latest

ಶಿರೂರು ಗುಡ್ಡ ಕುಸಿತ ಪ್ರಕರಣ: ಅಂಕೋಲಾ ಪೊಲೀಸ್ ಠಾಣೆ ಎದುರಿಗೆ ಸ್ವಾಮೀಜಿ ಪ್ರತಿಭಟನೆ.

ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿದ್ದ ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯದ ಆದೇಶ ಹೊರಡಿಸಿದರೂ ಮೌನವಾಗಿರುವ ಪೊಲೀಸರ ವಿರುದ್ಧ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. ಅಂಕೋಲಾ ಪೊಲೀಸ ಠಾಣೆ ಎದುರು ಅವರು ಮಂಗಳವಾರ ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಬ್ರಹ್ಮರ್ಷಿ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಆಕ್ರೋಶದ ಬೆನ್ನಲ್ಲೆ ಪೊಲೀಸರು ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿದರು. `ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿ 24 ದಿನ ಕಳೆದರೂ ಪೊಲೀಸರು ಎಫ್‌ಐಆರ್ ದಾಖಲಿಸಿರಲಿಲ್ಲ’ ಎಂದು ಸ್ವಾಮೀಜಿ ಅಸಮಧಾನ ವ್ಯಕ್ತಪಡಿಸಿದರು.

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ದೊರೆತಿಲ್ಲ. ಅವೈಜ್ಞಾನಿಕ ಕಾಮಗಾರಿ ಕೈಗೊಂಡು ಗುಡ್ಡ ಕುಸಿತಕ್ಕೆ ಕಾರಣವಾಗಿದ್ದ ಐಆರ್‌ಬಿ ಕಂಪನಿ ವಿರುದ್ಧ ಕ್ರಮವಾಗಿಲ್ಲ. ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಮೆಟ್ಟಿಲೇರಿದರು ಅವರು ಸ್ಪಂದಿಸಿಲ್ಲ. ಆದ್ದರಿಂದ ನ್ಯಾಯಾಲಯದ ಮೊರೆ ಹೋದೆವು. ಅಲ್ಲಿ ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಎಫ್‌ಐಆ‌ರ್ ದಾಖಲಿಸುವಂತೆ ಆದೇಶ ನೀಡಿದ್ದರೂ ಯಾವುದೇ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ’ ಎಂದು ಮಾಧ್ಯಮದ ಎದುರು ವಿವರಿಸಿದರು.

ಹಿಂದುಳಿದ ವರ್ಗದ ಮುಖ್ಯಮಂತ್ರಿ ಎನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂದು ಹೇಳಿಕೊಳ್ಳುವ ಗೃಹಮಂತ್ರಿ ಜಿ ಪರಮೇಶ್ವರ ಅವರಿಂದಲೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಅಸಾಧ್ಯವೇ? ಎಂದು ಪ್ರಶ್ನಿಸಿದರು. `ನ್ಯಾಯಾಲಯದ ಅದೇಶದಿಂದ ಗುಡ್ಡ ಕುಸಿತ ಪ್ರಕರಣದಲ್ಲಿ ನೋಂದವರಿಗೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿದೆ. ಶಿರೂರು ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರಿಗೆ ನ್ಯಾಯ ಕೊಡಿಸಿಯೇ ತಿರುತ್ತೇನೆ’ ಎಂದು ಘೋಷಿಸಿದರು.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago