ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಏಳು ಮಂದಿಯ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಅವರು, ಗಾಯಾಳುಗಳಿಗೆ ಸಂಪೂರ್ಣ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಘಟನಾ ಸ್ಥಳದಲ್ಲಿ ಅವಶೇಷಗಳನ್ನು ಪರಿಶೀಲಿಸಿದ ಸಿಎಂ, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ತಕ್ಷಣವೇ ಸ್ಥಳಕ್ಕೆ ಕರೆಯಿಸಿ ಮಾಹಿತಿ ಪಡೆದುಕೊಂಡರು. ವ್ಯಾಪಾರ ಮಾಡುತ್ತಿದ್ದ ಜನರ ಮೇಲೆ ಗೋಡೆ ಕುಸಿದು ನಿರಪರಾಧಿಗಳು ಬಲಿಯಾದ ಈ ಘಟನೆ ಕುರಿತು ವಿವರವಾಗಿ ವಿಚಾರಿಸಿದರು. ದುರಂತದ ಮೂಲ ಕಾರಣವನ್ನು ಪತ್ತೆಹಚ್ಚಲು ತಕ್ಷಣವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವೇಳೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿಎಂ, “ಇಂತಹ ಹಳೆಯ ಗೋಡೆಗಳ ಬಗ್ಗೆ ಮುಂಚಿತವಾಗಿ ಗಮನ ಹರಿಸಲು ಆಗಲಿಲ್ಲವೇ? ಇಲಾಖೆಗಳ ನಡುವೆ ಸಮನ್ವಯತೆ ಇಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡರು. “ಸ್ವಲ್ಪ ಎಚ್ಚರಿಕೆ ವಹಿಸಿದ್ದರೆ ಈ ಅನಾಹುತವನ್ನು ತಪ್ಪಿಸಬಹುದಾಗಿತ್ತು. ನಿಮ್ಮ ನಿರ್ಲಕ್ಷ್ಯದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ,” ಎಂದು ಕಿಡಿಕಾರಿದರು.
ನಂತರ ಅವರು ನೇರವಾಗಿ ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಯಾವುದೇ ರೀತಿಯ ಹಣಕಾಸಿನ ಭಾರ ರೋಗಿಗಳ ಮೇಲೆ ಬಾರದಂತೆ ಉಚಿತ ಚಿಕಿತ್ಸೆ ನೀಡಬೇಕು ಮತ್ತು ಚಿಕಿತ್ಸೆಯಲ್ಲಿ ಯಾವುದೇ ರೀತಿಯ ಲೋಪವಾಗಬಾರದು ಎಂದು ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.
ಇದೇ ವೇಳೆ, ಮಳೆಯಿಂದಾಗಿ ನಗರದಲ್ಲಿರುವ ಹಳೆಯ ಗೋಡೆಗಳು ಮತ್ತು ಅಪಾಯಕಾರ ಕಟ್ಟಡಗಳನ್ನು ತಕ್ಷಣ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ವಿಶೇಷ ಸೌಲಭ್ಯಗಳು ಹಾಗೂ ರಾಜಾತಿಥ್ಯದ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬ…
ಕಡೂರು: ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ…
ಬೆಂಗಳೂರು: ನಟಿ ರುಕ್ಮಿಣಿ ವಸಂತ್ ಅವರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ಎಐ ತಂತ್ರಜ್ಞಾನದ ಮೂಲಕ ಅಶ್ಲೀಲ ಡೀಪ್ಫೇಕ್ ಫೋಟೋ ಹಾಗೂ…
ಚೆನ್ನೈ: ಜೀವನದಲ್ಲಿ ಒಂದೆರಡು ಬಾರಿ ಸೋತರೆ ಸಾಕು, "ನನ್ನಿಂದ ಏನೂ ಆಗುವುದಿಲ್ಲ" ಎಂದು ಕನಸುಗಳನ್ನು ಅರ್ಧದಲ್ಲೇ ಕೈಬಿಡುವವರು ನಮ್ಮ ನಡುವೆ…
ಬೆಳಗಾವಿ: ₹2 ಕೋಟಿ ಜೀವ ವಿಮೆ ಹಣಕ್ಕಾಗಿ ಮಾಜಿ ಸೈನಿಕನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ…
ಸಿದ್ದಾಪುರ: ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪಿಐ ಸೀತಾರಾಮ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ…