Latest

ಬಾಲಕಿ ಮೇಲೆ ಅತ್ಯಾಚಾರ ಆರೋಪದ ಸ್ವಾಮೀಜಿಗೆ ಶಾಕ್: ರಾಮ ಮಂದಿರ ಮಠ ಧ್ವಂಸ ಮಾಡಿದ ಸರ್ಕಾರ

ಬೆಳಗಾವಿ: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರದ ಆರೋಪದ ಹಿನ್ನೆಲೆ ಜೈಲಿನಲ್ಲಿ ಇರುವ ರಾಮಮಂದಿರ ಮಠದ ಲೋಕೇಶ್ವರ ಸ್ವಾಮೀಜಿಗೆ ಮತ್ತೊಂದು ತೀವ್ರವಾದ ಆಘಾತ ಬಿದ್ದಿದೆ. ಸ್ವಾಮೀಜಿ ಅಕ್ರಮವಾಗಿ ನಿರ್ಮಿಸಿದ್ದ ಮಠವನ್ನು ಸರ್ಕಾರ ಗುರುವಾರ ಬೆಳಿಗ್ಗೆ ಸಂಪೂರ್ಣವಾಗಿ ನೆಲಸಮಗೊಳಿಸಿದೆ.

ರಾಯಬಾಗ ತಾಲೂಕು ಮೇಖಳಿ ಗ್ರಾಮದಲ್ಲಿರುವ ಮಠವನ್ನು ತಹಶಿಲ್ದಾರರ ನೇತೃತ್ವದಲ್ಲಿ ಮೂರು ಜೆಸಿಬಿಗಳ ಸಹಾಯದಿಂದ ಬೆಳಿಗ್ಗೆಯೇ ಧ್ವಂಸಗೊಳಿಸಲಾಯಿತು. ಈ ಮಠವನ್ನು ಸುಮಾರು ಎಂಟು ವರ್ಷಗಳ ಹಿಂದೆ ಸರ್ಕಾರದ ಗೈರಾಣ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿತ್ತು. ಸರ್ವೇ ನಂ. 225ರ ವ್ಯಾಪ್ತಿಯಲ್ಲಿ 8 ಎಕರೆ ಭೂಮಿಯನ್ನು ಆಕ್ರಮಿಸಿಕೊಂಡು ಈ ಧಾರ್ಮಿಕ ಕಟ್ಟಡವನ್ನು ನಿರ್ಮಿಸಲಾಗಿತ್ತು.

ಇದೆ ನಡುವೆ, ಲೋಕೇಶ್ವರ ಸ್ವಾಮೀಜಿಯ ವಿರುದ್ಧ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಗಂಭೀರವಾಗಿ ಕೇಳಿಬಂದಿದ್ದು, ತನಿಖೆಗಾಗಿ ಅವರು ಇದೀಗ ಪೊಲೀಸರ ವಶದಲ್ಲಿದ್ದಾರೆ. ಸ್ವಾಮೀಜಿ ಬಾಲಿಕೆಯನ್ನು ರಾಯಚೂರು ಹಾಗೂ ಬಾಗಲಕೋಟೆಯ ಲಾಡ್ಜ್‌ಗಳಿಗೆ ಕರೆದೊಯ್ದು ಎರಡು ದಿನಗಳ ಕಾಲ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಆರೋಪಗಳ ಬೇವುಗೆಯೊಂದಿಗೇ ಇಡೀ ಘಟನೆ ರಾಜ್ಯದಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ. ತನಿಖೆಯ ಜೊತೆಗೆ ಸರ್ಕಾರ ಅಕ್ರಮವಾಗಿ ನಿರ್ಮಿತ ಮಠದ ವಿರುದ್ಧ ಕಾನೂನು ಕ್ರಮ ಕೈಗೊಂಡು ಅದನ್ನು ನೆಲಸಮಗೊಳಿಸಿರುವುದು ಪ್ರಮುಖ ಬೆಳವಣಿಗೆಯಾಗಿದೆ.

ಧಾರ್ಮಿಕ ಅಡ್ಡೆಯಲ್ಲಿ ಕಾನೂನು ಮೀರಿದ ಪ್ರవర್ತನೆ ನಡೆಸಿದ ಈ ಪ್ರಕರಣದಿಂದ ಸಮಾಜದಲ್ಲಿ ಕೇವಲ ಆತಂಕವಷ್ಟೇ ಅಲ್ಲ, ನ್ಯಾಯ ಮತ್ತು ಶಿಸ್ತಿನ ಕುರಿತು ಹೊಸ ಚರ್ಚೆ ಆರಂಭವಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

15 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

15 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

15 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

15 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago