Categories: CinemaLatest

ಕಿರುತೆರೆ-ಬೆಳ್ಳಿತೆರೆಗೆ ಶಾಕ್‌: ನಟ ದಿಲೀಪ್‌ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್‌ ರಾಜ್ (48) ಅವರ ಅಕಾಲಿಕ ನಿಧನ ಕನ್ನಡ ಕಲಾರಂಗಕ್ಕೆ ಭಾರೀ ಆಘಾತ ತಂದಿದೆ. ಬುಧವಾರ ಬೆಳಗ್ಗಿನ ಜಾವ ಬಂದ ಈ ದುಃಖದ ಸುದ್ದಿ ಅಭಿಮಾನಿಗಳು ಮತ್ತು ಕಲಾವಿದರನ್ನು ಮೌನಕ್ಕೀಡಾಗಿಸಿದೆ.

ಮಂಗಳವಾರ ರಾತ್ರಿ ಆರೋಗ್ಯವಾಗಿಯೇ ಮಲಗಿದ್ದ ದಿಲೀಪ್‌ ರಾಜ್‌ಗೆ ಏಕಾಏಕಿ ಹೃದಯಾಘಾತವಾಗಿದ್ದು, ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರಸ್ವಾಮಿ ಲೇಔಟ್‌ನ ಅಪೋಲೊ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಅವರ ಪಾರ್ಥಿವ ಶರೀರವನ್ನು ಉತ್ತರಹಳ್ಳಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಹಲವಾರು ಕಲಾವಿದರು, ಸ್ನೇಹಿತರು ಹಾಗೂ ಅಭಿಮಾನಿಗಳು ಆಗಮಿಸಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ನಟನೆ ಮಾತ್ರವಲ್ಲದೆ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದ ದಿಲೀಪ್‌ ರಾಜ್‌, ಪತ್ನಿ ಶ್ರೀವಿದ್ಯಾ ಅವರೊಂದಿಗೆ ಸೇರಿ ಅನೇಕ ಜನಪ್ರಿಯ ಧಾರಾವಾಹಿಗಳನ್ನು ನಿರ್ಮಿಸಿದ್ದರು. ಅವರು ನಿರ್ಮಿಸಿದ ʼಹಿಟ್ಲರ್‌ ಕಲ್ಯಾಣʼ, ʼಪಾರುʼ, ʼನಾ ನಿನ್ನ ಬಿಡಲಾರೆʼ, ʼಕೃಷ್ಣ ರುಕ್ಕುʼ ಹಾಗೂ ʼವಿದ್ಯಾ ವಿನಾಯಕʼ ಧಾರಾವಾಹಿಗಳು ಕಿರುತೆರೆಯಲ್ಲಿ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದವು.

ಕಿರುತೆರೆಯ ಮೂಲಕ ಜನಮನ ಗೆದ್ದ ಅವರು 2005ರಲ್ಲಿ ಬಿಡುಗಡೆಯಾದ ʼಭಾಯ್ ಫ್ರೆಂಡ್ʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು. ಆರಂಭಿಕ ದಿನಗಳಲ್ಲಿ ಸವಾಲುಗಳನ್ನು ಎದುರಿಸಿದ್ದರೂ, 2007ರಲ್ಲಿ ಬಿಡುಗಡೆಯಾದ ಮಿಲನ ಸಿನಿಮಾದ ಖಳನಾಯಕ ಪಾತ್ರ ಅವರ ವೃತ್ತಿಜೀವನಕ್ಕೆ ದೊಡ್ಡ ತಿರುವು ನೀಡಿತು. ಬಳಿಕ ಅವರು ಹಲವು ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಸ್ಥಾನ ಪಡೆದರು.

ʼ7 ಓ ಕ್ಲಾಕ್ʼ, ʼಕ್ಷಣ ಕ್ಷಣʼ, ಯು ಟರ್ನ್, ʼಅಂಬಿ ನಿಂಗ್ ವಯಸ್ಸಾಯ್ತೋʼ, ʼಕಿಸ್ಮತ್ʼ ಸೇರಿದಂತೆ 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ʼಲವ್‌ ಮಾಕ್ಟೆಲ್‌ 3ʼ ಚಿತ್ರದಲ್ಲಿನ ಅವರ ಪಾತ್ರಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಇನ್ನೊಂದೆಡೆ, ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದ್ದ ʼಹಿಟ್ಲರ್‌ ಕಲ್ಯಾಣʼ ಧಾರಾವಾಹಿಯ ಅಭಿರಾಮ್ ಜಯಶಂಕರ್ ಅಲಿಯಾಸ್‌ ಎಜೆ ಪಾತ್ರ ದಿಲೀಪ್‌ ರಾಜ್‌ಗೆ ಅಪಾರ ಜನಪ್ರಿಯತೆ ತಂದಿತ್ತು. ಈ ಧಾರಾವಾಹಿಯಲ್ಲಿ ನಟನೆಯ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಅವರು ಹೊತ್ತಿದ್ದರು. ಅವರೊಂದಿಗೆ ನಟಿಸಿದ್ದ ಹಲವರು ಇಂದು ಕಣ್ಣೀರಿನ ನಮನ ಸಲ್ಲಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

3 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

3 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

3 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

3 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago