Categories: CrimeLatest

ನಂಜನಗೂಡಿನಲ್ಲಿ ಬೆಚ್ಚಿಬೀಳಿಸುವ ಪ್ರಕರಣ: ಯುವಕನ ಅಪಹರಣ, ಬಲವಂತವಾಗಿ ಮಂಗಳಮುಖಿ ವೇಷ ಮತ್ತು ಸೆಕ್ಸ್ ವರ್ಕ್ ಗೆ ಬಳಕೆ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಅಮಾನವೀಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಯುವಕನೊಬ್ಬನನ್ನು ಅಪಹರಿಸಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಹಣ ಸಂಗ್ರಹ ಹಾಗೂ ಸೆಕ್ಸ್ ವರ್ಕ್‌ಗೆ ಬಳಸಿದ ಆರೋಪಗಳು ಕೇಳಿಬಂದಿವೆ. ಈ ಘಟನೆ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದು, ಪೀಡಿತ ಯುವಕ ಇದೀಗ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾನೆ.

ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ (ಅಕ್ಷತಾ) ಎಂಬ ಯುವಕ ಈ ಪ್ರಕರಣದ ಪೀಡಿತನಾಗಿದ್ದಾನೆ. ಮಂಗಳೂರು ಮೂಲದ ಅನಿತಾ ಎಂಬ ಮಂಗಳಮುಖಿ ಹಾಗೂ ಆಕೆಯ ತಂಡದ ಮೇಲೆ ಗಂಭೀರ ಆರೋಪಗಳು ಕೇಳಿಬಂದಿವೆ.

ಸುಮಾರು ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಬಸ್‌ಗಾಗಿ ಕಾಯುತ್ತಿದ್ದ ಅನಿಲ್ ಕುಮಾರ್ ಅವರನ್ನು ಅನಿತಾ ಮತ್ತು ಆಕೆಯ ತಂಡ ಮೋಸದಿಂದ ಕರೆದೊಯ್ದು ಅಪಹರಿಸಿದ್ದಾರೆ ಎನ್ನಲಾಗಿದೆ. ಬಳಿಕ ಅವರನ್ನು ಮಂಗಳೂರಿಗೆ ಕರೆದೊಯ್ದು ಬಲವಂತವಾಗಿ ಸೀರೆ, ಆಭರಣಗಳನ್ನು ಹಾಕಿಸಿ ಮಂಗಳಮುಖಿಯರ ವೇಷದಲ್ಲಿ ಬೀದಿಗಳಲ್ಲಿ ಹಾಗೂ ಅಂಗಡಿಗಳ ಮುಂದೆ ಹಣ ಸಂಗ್ರಹಿಸಲು ಒತ್ತಾಯಿಸಿದ್ದಾರೆ.

ಪ್ರತಿದಿನ 2 ರಿಂದ 3 ಸಾವಿರ ರೂಪಾಯಿ ವರೆಗೆ ಕಲೆಕ್ಷನ್ ಮಾಡಿಸಿ, ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್‌ಗಳನ್ನು ತಯಾರಿಸಿ ಅಪ್‌ಲೋಡ್ ಮಾಡಲಾಗಿದೆ ಎಂಬ ಆರೋಪವೂ ಇದೆ. ಅಲ್ಲದೆ ಮಂಗಳೂರು ಹಾಗೂ ಕೇರಳ ಭಾಗಗಳಿಗೆ ಕಳುಹಿಸಿ ಸೆಕ್ಸ್ ವರ್ಕ್‌ಗೆ ಬಳಸಲಾಗಿದೆ ಎಂದು ಪೀಡಿತ ಯುವಕ ದೂರಿನಲ್ಲಿ ತಿಳಿಸಿದ್ದಾರೆ.

ಇದರ ನಡುವೆ, ಆಧಾರ್ ಕಾರ್ಡ್‌ನಲ್ಲಿ ಟ್ರಾನ್ಸ್ಜೆಂಡರ್ ಎಂದು ನಮೂದಿಸಿ, ಸಮಾಜ ಕಲ್ಯಾಣ ಇಲಾಖೆಯಿಂದ ಅಧಿಕೃತ ಪ್ರಮಾಣಪತ್ರವೂ ಪಡೆಯಲಾಗಿದೆ ಎನ್ನುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ನೀಡಿದೆ. ಮುಂದಿನ ಹಂತದಲ್ಲಿ ಮುಂಬೈಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಶಾಶ್ವತ ಲಿಂಗ ಬದಲಾವಣೆಗೆ ಯೋಜನೆ ರೂಪಿಸಿದ್ದರ ಬಗ್ಗೆ ಮಾಹಿತಿ ತಿಳಿದ ನಂತರ, ಅನಿಲ್ ಕುಮಾರ್ ಈ ಜಾಲದಿಂದ ತಪ್ಪಿಸಿಕೊಳ್ಳಲು ನಿರ್ಧರಿಸಿದ್ದಾರೆ.

ತಾನು ಸಂಪಾದಿಸಿದ ಸುಮಾರು 3 ಲಕ್ಷ ರೂಪಾಯಿ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ, ಆರೋಪಿಗಳು ಬೆದರಿಕೆ ಹಾಕಿದ್ದು, ತಾನು ಕಳ್ಳತನ ಮಾಡಿದ್ದಾಗಿ ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ. ಬಳಿಕ ಪೀಡಿತ ಯುವಕ ಮಂಗಳೂರಿನಿಂದ ನಂಜನಗೂಡಿಗೆ ಮರಳಿ ಬಂದಿದ್ದಾನೆ.

ಆದರೆ, ನಂತರವೂ ಆರೋಪಿಗಳು ಅವರನ್ನು ಮತ್ತೆ ದಂಧೆಗೆ ತಳ್ಳಲು ಪ್ರಯತ್ನಿಸಿದ್ದು, ಮನೆಗೆ ಬಂದು ಗಲಾಟೆ ಮಾಡಿರುವುದಾಗಿ ಆರೋಪಿಸಲಾಗಿದೆ. ಮಾನಸಿಕ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ಅನಿಲ್ ಕುಮಾರ್ ಮೈಸೂರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಂಜನಗೂಡು ಪೊಲೀಸರು ತಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಪೀಡಿತ ಯುವಕನಿಗೆ ಶೇ.90 ರಷ್ಟು ದೃಷ್ಟಿ ಸಮಸ್ಯೆ ಇದ್ದು, ಅವನಿಗೆ ಲೈಂಗಿಕ ದೌರ್ಬಲ್ಯ ಇಲ್ಲದಿದ್ದರೂ ಟ್ರಾನ್ಸ್ಜೆಂಡರ್ ಪ್ರಮಾಣಪತ್ರ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಒಟ್ಟಾರೆ, ಅಮಾಯಕ ಯುವಕರನ್ನು ಬಲವಂತವಾಗಿ ಮಂಗಳಮುಖಿಯರಾಗಿ ಪರಿವರ್ತಿಸಿ ದುರ್ಬಳಕೆ ಮಾಡುವ ಕರಾಳ ಜಾಲ ಇನ್ನೂ ಸಕ್ರಿಯವಾಗಿದೆ ಎಂಬ ಆತಂಕವನ್ನು ಈ ಪ್ರಕರಣ ಮತ್ತೊಮ್ಮೆ ಎತ್ತಿಹಿಡಿದಿದೆ. ಪ್ರಕರಣದ ಹಿಂದೆ ಇರುವ ನಿಜವಾದ ಸಂಗತಿಗಳು ಏನು, ಪ್ರಮಾಣಪತ್ರ ನೀಡುವ ಪ್ರಕ್ರಿಯೆಯಲ್ಲಿ ನಿಯಮ ಪಾಲನೆಯಾಯಿತೇ ಎಂಬ ಪ್ರಶ್ನೆಗಳಿಗೆ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ಉತ್ತರ ನೀಡಬೇಕಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

18 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

18 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

18 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

18 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

18 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

18 hours ago