Categories: Latest

ಆರ್ಥಿಕ ಸಂಕಷ್ಟದಿಂದ ಆಘಾತಕರ ನಿರ್ಧಾರ: ಮಗುವಿಗೆ ಇಲಿ ಪಾಷಾಣವಿಲ್ಲಿ ಟೀ ಕುಡಿಸಿ ತಾಯಿಯ ಆತ್ಮಹತ್ಯೆ ಯತ್ನ”

ಬೆಂಗಳೂರು: ಮನೆಗೂಟದ ಕಲಹ, ಆರ್ಥಿಕ ಸಂಕಷ್ಟಗಳು ಇನ್ನೊಂದು ಭೀಕರ ಘಟನೆಗೆ ಕಾರಣವಾಗಿವೆ. ತಾಯಿಯೊಬ್ಬಳು ತನ್ನ ಮಗುಗೂ ಸಹ ಇಲಿ ಪಾಷಾಣ ಬೆರೆಸಿದ ಟೀ ಕುಡಿಸಿ, ತಾನೂ ಅದೇ ವಿಷಪಾನ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಧಾನಿ ಬೆಂಗಳೂರು ನಗರದಲ್ಲಿ ನಡೆದಿದೆ. ಈ ಘಟನೆ ನಗರದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಈ ದುರ್ಘಟನೆ ನಡೆದಿದೆ. ಒಂದೂವರೆ ವರ್ಷದ ಪುಟ್ಟ ಮಗು ಚಾರ್ವಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ತಾಯಿ ಚಂದ್ರಿಕಾ (24) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಚಂದ್ರಿಕಾ ಹಾಗೂ ಯೋಗೇಶ್ ದಂಪತಿ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಯೋಗೇಶ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕುಟುಂಬದಲ್ಲಿ ಆರ್ಥಿಕ ತೊಂದರೆ ಹಾಗೂ ವೈವಾಹಿಕ ಕಲಹಗಳು ತೀವ್ರವಾಗಿದ್ದವು.

ಜುಲೈ 30 ರಂದು ಬೆಳಿಗ್ಗೆ ಯೋಗೇಶ್ ಕೆಲಸಕ್ಕೆ ಹೋಗಿದ್ದ ಬಳಿಕ ಚಂದ್ರಿಕಾ ಮನೆಯಲ್ಲಿ ಟೀ ತಯಾರಿಸಿ ಅದರಲ್ಲಿ ಇಲಿ ಪಾಷಾಣ (ರಾಟ್ ಪಾಯಿಸನ್) ಬೆರೆಸಿದ್ದಾಳೆ. ಬಳಿಕ ಅದು ತನ್ನ ಮಗಳು ಚಾರ್ವಿಗೆ ಕುಡಿಸಿ, ತಾನೂ ಕುಡಿದಿದ್ದಾರೆ ಎನ್ನಲಾಗಿದೆ.

ವಿಷಪಾನದ ನಂತರ ಶರೀರದಲ್ಲಿ ತೀವ್ರ ವ್ಯಥೆ ಕಾಣಿಸಿಕೊಂಡಿದ್ದರಿಂದ ಚಂದ್ರಿಕಾ ತಾನು ಮಾಡಿದ ಕೃತ್ಯವನ್ನು ಗಂಡನಿಗೆ ಫೋನ್ ಮೂಲಕ ತಿಳಿಸಿದ್ದಾರೆ. ತಕ್ಷಣವೇ ಮನೆಗೆ ಧಾವಿಸಿದ ಯೋಗೇಶ್, ತಾಯಿ ಮಗು ಇಬ್ಬರನ್ನೂ ತುರ್ತುವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಮಗು ಚಾರ್ವಿಗೆ ನೀಡಿದ ಚಿಕಿತ್ಸೆ ಫಲಕಾರಿಯಾಗದೇ ಚಿಕ್ಕವನೆಯೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಚಂದ್ರಿಕಾಗೆ ಚಿಕಿತ್ಸೆ ಮುಂದುವರಿದಿದ್ದು, ವೈದ್ಯರ ನಿಗಾವಿನಲ್ಲಿ ಇದ್ದಾರೆ.

ಈ ಕುರಿತು ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿಸುತ್ತಿದ್ದಾರೆ. ತಾಯಿ ಮಾಡಿದ ಕೃತ್ಯದ ಹಿಂದೆ ಹಿನ್ನಲೆಯಲ್ಲಿ ಕುಟುಂಬದ ಸಮಸ್ಯೆಗಳ ಕುರಿತಂತೆ ತನಿಖೆ ನಡೆಯುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago