ಕೊಡಗು: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ರಕ್ತಸಿಕ್ತ ಘಟನೆ ನಡೆದಿದ್ದು, ಕಾಫಿ ತೋಟದ ಲೈನ್ ಮನೆಯಲ್ಲಿ ನಾಲ್ವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಈ ದಾರುಣ ಘಟನೆಯು ಸ್ಥಳೀಯರಲ್ಲಿ ಭಯದ ವಾತಾವರಣ ಮೂಡಿಸಿದೆ.
ಹತ್ಯೆಗೀಡಾದವರನ್ನು ಕರಿಯ, ಗೌರಿ, ನಾಗಿ ಹಾಗೂ ಕೇವಲ 7 ವರ್ಷದ ಬಾಲಕಿ ಕಾವೇರಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 35 ವರ್ಷದ ಗಿರೀಶ್ ಎಂಬಾತ ಈ ಹತ್ಯೆ ನಡೆಸಿರುವುದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಅಕ್ರಮ ಸಂಬಂಧವೇ ಕಾರಣ ಎಂದು ಹೇಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…