ಉತ್ತರ ಪ್ರದೇಶದ ಮೀರತ್ನಲ್ಲಿ ಭಾರತೀಯ ಸೈನ್ಯದ ಯೋಧನ ಮೇಲೆ ಟೋಲ್ ಪ್ಲಾಜಾ ಸಿಬ್ಬಂದಿ ನಡೆಸಿದ ಕ್ರೂರ ಹಲ್ಲೆಯ ಘಟನೆ ತೀವ್ರ ಆಕ್ರೋಶ ಮೂಡಿಸಿದೆ.
ಶ್ರೀನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಪಿಲ್ ಕವಾಡ್ ಎಂಬ ಯೋಧ ರಜೆಯ ನಂತರ ಮರಳಿ ಸೇನೆಗೆ ಸೇರಲು ದೆಹಲಿ ವಿಮಾನ ನಿಲ್ದಾಣದತ್ತ ತನ್ನ ಸೋದರಸಂಬಂಧಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಮೀರತ್–ಕರ್ನಾಲ್ ಹೆದ್ದಾರಿಯ ಭುನಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ.
ಟೋಲ್ ಪ್ಲಾಜಾದಲ್ಲಿ ವಾಹನಗಳ ಉದ್ದನೆಯ ಸಾಲಿನಿಂದಾಗಿ ಆತುರಗೊಂಡಿದ್ದ ಕಪಿಲ್, ತನ್ನ ಪರಿಸ್ಥಿತಿಯನ್ನು ಸಿಬ್ಬಂದಿಗಳಿಗೆ ವಿವರಿಸಿದರೂ, ಮಾತಿನ ಚಕಮಕಿ ವಾಗ್ವಾದಕ್ಕೆ ತಿರುಗಿತು. ಅಷ್ಟರಲ್ಲೇ ಟೋಲ್ ಪ್ಲಾಜಾದ ಕೆಲವರು ಯೋಧನ ಮೇಲೆ ದಾಳಿ ನಡೆಸಿ, ಕಂಬಕ್ಕೆ ಕಟ್ಟಿ ಕ್ರೂರವಾಗಿ ಥಳಿಸಿದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.
ಮೀರತ್ ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರ ಪತ್ತೆಗೆ ಟೋಲ್ ಪ್ಲಾಜಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಜೆ ಮುಗಿಸಿ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಮೇಲೆ ನಡೆದ ಈ ಹಲ್ಲೆ ಸೈನಿಕರ ಗೌರವದ ಮೇಲಿನ ಅವಮಾನ ಎಂದು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…