Latest

ದಾವಣಗೆರೆಯಲ್ಲಿ ಅತ್ತೆ-ಅಳಿಯನ ಶಾಕ್ ಲವ್ ಸ್ಟೋರಿ: ಮದುವೆಯಾದ 2 ತಿಂಗಳಲ್ಲೇ ಪತ್ನಿಯನ್ನ ಬಿಟ್ಟು ಎಸ್ಕೇಪ್!

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಬಹುಚರ್ಚಿತ ಮತ್ತು ಅಸಾಮಾನ್ಯ ಘಟನೆ ನಡೆದಿದೆ. 25 ವರ್ಷದ ಯುವಕ ತನ್ನ 55 ವರ್ಷದ ಅತ್ತೆಯೊಂದಿಗೆ ಓಡಿಹೋಗಿರುವ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮದುವೆಯಾದ ಕೇವಲ ಎರಡು ತಿಂಗಳೊಳಗೆ ನಡೆದಿದ್ದು, ಪತ್ನಿ ಆಘಾತಕ್ಕೊಳಗಾಗಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರ ಪ್ರಕಾರ, 25 ವರ್ಷದ ಗಣೇಶ್ ಎಂಬ ಯುವಕ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ನಿವಾಸಿ. ಕೆಲವು ತಿಂಗಳ ಹಿಂದೆ, ಮುದ್ದೇನಹಳ್ಳಿ ಗ್ರಾಮದ ನಾಗರಾಜ್ ಅವರ ಮಗಳು ಹೇಮಾಳೊಂದಿಗೆ ಗಣೇಶ್‌ ವಿವಾಹವಾಗಿದ್ದ. ಈ ಮದುವೆ ನಾಗರಾಜ್ ಅವರ ಎರಡನೇ ಪತ್ನಿ ಶಾಂತಾ ಅವರ ತಯಾರಿಯಲ್ಲಿ ನಡೆದಿದ್ದಂತೆ. ಶಾಂತಾ, 13 ವರ್ಷಗಳ ಹಿಂದೆ ನಾಗರಾಜ್ ಅವರ 2ನೇ ಪತ್ನಿಯಾಗಿ ಮನೆಗೆ ಬಂದಿದ್ದರು.

ಮದುವೆಗೂ ಮುನ್ನ ಶಾಂತಾ, ಗಣೇಶನನ್ನು ಕುಟುಂಬದ ಮನೆಗೆ ತಂದಿದ್ದಲ್ಲದೆ, “ಈತನಿಗೆ ನನ್ನ ಮೊಮ್ಮಗತಿಯನ್ನು ಮದುವೆ ಮಾಡಿಸಿ ಮನೆ ಅಳಿಯನಾಗಿ ಇಲ್ಲಿಯೇ ಇಡುವೆ” ಎಂದು ಕುಟುಂಬಸ್ಥರ ವಿಶ್ವಾಸ ಗೆದ್ದಿದ್ದರು. ಈ ಮಾತಿನಂತೆ, ಎರಡು ತಿಂಗಳ ಹಿಂದಷ್ಟೇ ಹೇಮಾ ಮತ್ತು ಗಣೇಶ್‌ ಮದುವೆಯಾಗಿ ದಾಂಪತ್ಯ ಜೀವನ ಆರಂಭಿಸಿದ್ದರು.

ಆದರೆ ಮದುವೆಯಾದ ಕೇವಲ 15 ದಿನಗಳಲ್ಲೇ, ಹೇಮಾ ತನ್ನ ಪತಿ ಗಣೇಶ್ ಮತ್ತು ತಾಯಿ ಶಾಂತಾ ನಡುವೆ ಅಕ್ರಮ ಸಂಬಂಧವಿರುವ ಅನುಮಾನಕ್ಕೆ ಬಿದ್ದಿದ್ದಾಳೆ. ಗಣೇಶನ ಮೊಬೈಲ್‌ನಲ್ಲಿ ಶಾಂತಾ ಕಳಿಸಿದ್ದ ಅಶ್ಲೀಲ ಸಂದೇಶಗಳು ಪತ್ತೆಯಾಗಿದ್ದು, ಅವುಗಳನ್ನು ಹೇಮಾ ತನ್ನ ತಂದೆ ನಾಗರಾಜ್‌ ಅವರಿಗೆ ತೋರಿಸಿದ್ದಾಳೆ.

ಈ ಘಟನೆ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸಿದ ಬೆನ್ನಲ್ಲೇ, ಶಾಂತಾ ಹಾಗೂ ಗಣೇಶ್ ಹಣ, ಆಭರಣಗಳನ್ನು ತೆಗೆದುಕೊಂಡು ಮನೆ ಬಿಟ್ಟು ಪರಾರಿಯಾಗಿದ್ದಾರೆ. ಚನ್ನಗಿರಿ ಬಸ್ ನಿಲ್ದಾಣದಲ್ಲಿ ಹೇಮಾಳನ್ನ ಬಿಟ್ಟು ಇಬ್ಬರೂ ಎಸ್ಕೇಪ್ ಆಗಿರುವುದು ದೃಢಪಟ್ಟಿದೆ.

ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶಾಂತಾ ಮತ್ತು ಗಣೇಶ್ ವಿರುದ್ಧ ಹುಡುಕಾಟ ಹಾಗೂ ತನಿಖೆ ಆರಂಭಿಸಿದ್ದಾರೆ.

ಈ ರೀತಿಯ ಘಟನೆಗಳು ಮೊದಲೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ವರದಿಯಾಗುತ್ತಿದ್ದರೆ, ಈಗ ಕರ್ನಾಟಕದಲ್ಲೂ ಇಂತಹ ದುರ್ಘಟನೆಗಳು ನಡೆಯುತ್ತಿರುವುದು ಸಾಮಾಜಿಕವಾಗಿ ಆತಂಕಕಾರಿ ಬೆಳವಣಿಗೆ ಎಂಬ ಮಾತುಗಳು ಕೇಳಿಬರುತ್ತಿವೆ.

nazeer ahamad

Recent Posts

ಗಂಜಾ ಪೆಡ್ಲರ್ ಮೇಲೆ ಕೋಲಾರ ಪೊಲೀಸರ ದಾಳಿ, ಆರೋಪಿ ಪೊಲೀಸರ ಅತಿಥಿ.

ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಐ ಶ್ಕಾಂತರಾಜ್.ಕೆ ರವರು ಇದೇ ತಿಂಗಳ ಜೂನ್ 26 ರಂದು ಸಂಜೆ ಸಮಯ ಠಾಣೆಯಲ್ಲಿದ್ದಾಗ…

7 hours ago

ಸ್ನಾನಗೃಹದಲ್ಲಿ ಇಣುಕಿ ನೋಡಿದ ಯುವಕನಿಗೆ ಸಾರ್ವಜನಿಕರ ತೀಕ್ಷ್ಣ ಪಾಠ: ಹೊನ್ನಾವರದಲ್ಲಿ ಘಟನೆ

ಹೊನ್ನಾವರ: ಮಹಿಳೆಯರ ಗೌರವ ಮತ್ತು ಗೌಪ್ಯತೆ ಕಡೆಗಣಿಸುವ ಆತ್ಮಹೀನ ಕೃತ್ಯವೊಂದು ಹೊನ್ನಾವರದಲ್ಲಿ ಬೆಳಕಿಗೆ ಬಂದಿದೆ. ಸ್ನಾನ ಮಾಡುವ ಮಹಿಳೆಯನ್ನೇ ಇಣುಕಿ…

7 hours ago

ಧಾರವಾಡದಲ್ಲಿ ಕುಡಿದ ಮತ್ತಿನಲ್ಲಿ ಆಟೋ ಪಲ್ಟಿ: ಚಾಲಕನಿಗೆ ಗಂಭೀರ ಗಾಯ

ಧಾರವಾಡ: ನಗರದ ಹಳೆ ಕೋರ್ಟ್ ವೃತ್ತದ ಬಳಿ ಆಘಾತಕಾರಿ ಘಟನೆ ಒಂದರಲ್ಲಿ, ಕಂಠಪೂರ್ತಿ ಮದ್ಯಪಾನ ಮಾಡಿಕೊಂಡು ಆಟೋ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು…

8 hours ago

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಾಂಜಾ ವಶ: 5 ಲಕ್ಷ ಮೌಲ್ಯದ ಮಾದಕ ವಸ್ತು ಪತ್ತೆ

ಹುಬ್ಬಳ್ಳಿ, ಜೂನ್ 27 – ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ನಡೆದ ಸಂಯುಕ್ತ ತಪಾಸಣೆಯಲ್ಲಿ ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗಿದೆ.…

9 hours ago

ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿಕಾರಿ: ಬಿಜೆಪಿ ನೇತೃತ್ವಕ್ಕೆ ಸವಾಲು

ಬೆಂಗಳೂರು: ಕರ್ನಾಟಕ ಬಿಜೆಪಿ ಶಿಬಿರದಲ್ಲಿ ಆಂತರಿಕ ಬಿಕ್ಕಟ್ಟು ಮತ್ತಷ್ಟು ಗಂಭೀರ ಸ್ವರೂಪ ಪಡೆಯುತ್ತಿದ್ದು, ನಾಯಕತ್ವದ ವಿರುದ್ ಸಮಾಧಾನ ದಿನದಿಂದ ದಿನಕ್ಕೆ…

11 hours ago

ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಪಿಎಫ್‌ಐ ನಂಟು, ವಿದೇಶಿ ಹಣದ ಜಾಡು ಶೋಧನೆ

ಮಂಗಳೂರು: ವಿವಾದಾತ್ಮಕ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರಮುಖ…

12 hours ago