Latest

ದಾವಣಗೆರೆಯಲ್ಲಿ ಅತ್ತೆ-ಅಳಿಯನ ಶಾಕ್ ಲವ್ ಸ್ಟೋರಿ: ಮದುವೆಯಾದ 2 ತಿಂಗಳಲ್ಲೇ ಪತ್ನಿಯನ್ನ ಬಿಟ್ಟು ಎಸ್ಕೇಪ್!

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಬಹುಚರ್ಚಿತ ಮತ್ತು ಅಸಾಮಾನ್ಯ ಘಟನೆ ನಡೆದಿದೆ. 25 ವರ್ಷದ ಯುವಕ ತನ್ನ 55 ವರ್ಷದ ಅತ್ತೆಯೊಂದಿಗೆ ಓಡಿಹೋಗಿರುವ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮದುವೆಯಾದ ಕೇವಲ ಎರಡು ತಿಂಗಳೊಳಗೆ ನಡೆದಿದ್ದು, ಪತ್ನಿ ಆಘಾತಕ್ಕೊಳಗಾಗಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರ ಪ್ರಕಾರ, 25 ವರ್ಷದ ಗಣೇಶ್ ಎಂಬ ಯುವಕ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ನಿವಾಸಿ. ಕೆಲವು ತಿಂಗಳ ಹಿಂದೆ, ಮುದ್ದೇನಹಳ್ಳಿ ಗ್ರಾಮದ ನಾಗರಾಜ್ ಅವರ ಮಗಳು ಹೇಮಾಳೊಂದಿಗೆ ಗಣೇಶ್‌ ವಿವಾಹವಾಗಿದ್ದ. ಈ ಮದುವೆ ನಾಗರಾಜ್ ಅವರ ಎರಡನೇ ಪತ್ನಿ ಶಾಂತಾ ಅವರ ತಯಾರಿಯಲ್ಲಿ ನಡೆದಿದ್ದಂತೆ. ಶಾಂತಾ, 13 ವರ್ಷಗಳ ಹಿಂದೆ ನಾಗರಾಜ್ ಅವರ 2ನೇ ಪತ್ನಿಯಾಗಿ ಮನೆಗೆ ಬಂದಿದ್ದರು.

ಮದುವೆಗೂ ಮುನ್ನ ಶಾಂತಾ, ಗಣೇಶನನ್ನು ಕುಟುಂಬದ ಮನೆಗೆ ತಂದಿದ್ದಲ್ಲದೆ, “ಈತನಿಗೆ ನನ್ನ ಮೊಮ್ಮಗತಿಯನ್ನು ಮದುವೆ ಮಾಡಿಸಿ ಮನೆ ಅಳಿಯನಾಗಿ ಇಲ್ಲಿಯೇ ಇಡುವೆ” ಎಂದು ಕುಟುಂಬಸ್ಥರ ವಿಶ್ವಾಸ ಗೆದ್ದಿದ್ದರು. ಈ ಮಾತಿನಂತೆ, ಎರಡು ತಿಂಗಳ ಹಿಂದಷ್ಟೇ ಹೇಮಾ ಮತ್ತು ಗಣೇಶ್‌ ಮದುವೆಯಾಗಿ ದಾಂಪತ್ಯ ಜೀವನ ಆರಂಭಿಸಿದ್ದರು.

ಆದರೆ ಮದುವೆಯಾದ ಕೇವಲ 15 ದಿನಗಳಲ್ಲೇ, ಹೇಮಾ ತನ್ನ ಪತಿ ಗಣೇಶ್ ಮತ್ತು ತಾಯಿ ಶಾಂತಾ ನಡುವೆ ಅಕ್ರಮ ಸಂಬಂಧವಿರುವ ಅನುಮಾನಕ್ಕೆ ಬಿದ್ದಿದ್ದಾಳೆ. ಗಣೇಶನ ಮೊಬೈಲ್‌ನಲ್ಲಿ ಶಾಂತಾ ಕಳಿಸಿದ್ದ ಅಶ್ಲೀಲ ಸಂದೇಶಗಳು ಪತ್ತೆಯಾಗಿದ್ದು, ಅವುಗಳನ್ನು ಹೇಮಾ ತನ್ನ ತಂದೆ ನಾಗರಾಜ್‌ ಅವರಿಗೆ ತೋರಿಸಿದ್ದಾಳೆ.

ಈ ಘಟನೆ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸಿದ ಬೆನ್ನಲ್ಲೇ, ಶಾಂತಾ ಹಾಗೂ ಗಣೇಶ್ ಹಣ, ಆಭರಣಗಳನ್ನು ತೆಗೆದುಕೊಂಡು ಮನೆ ಬಿಟ್ಟು ಪರಾರಿಯಾಗಿದ್ದಾರೆ. ಚನ್ನಗಿರಿ ಬಸ್ ನಿಲ್ದಾಣದಲ್ಲಿ ಹೇಮಾಳನ್ನ ಬಿಟ್ಟು ಇಬ್ಬರೂ ಎಸ್ಕೇಪ್ ಆಗಿರುವುದು ದೃಢಪಟ್ಟಿದೆ.

ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶಾಂತಾ ಮತ್ತು ಗಣೇಶ್ ವಿರುದ್ಧ ಹುಡುಕಾಟ ಹಾಗೂ ತನಿಖೆ ಆರಂಭಿಸಿದ್ದಾರೆ.

ಈ ರೀತಿಯ ಘಟನೆಗಳು ಮೊದಲೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ವರದಿಯಾಗುತ್ತಿದ್ದರೆ, ಈಗ ಕರ್ನಾಟಕದಲ್ಲೂ ಇಂತಹ ದುರ್ಘಟನೆಗಳು ನಡೆಯುತ್ತಿರುವುದು ಸಾಮಾಜಿಕವಾಗಿ ಆತಂಕಕಾರಿ ಬೆಳವಣಿಗೆ ಎಂಬ ಮಾತುಗಳು ಕೇಳಿಬರುತ್ತಿವೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

16 minutes ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

18 minutes ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

20 minutes ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

50 minutes ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

1 hour ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

2 hours ago