Latest

ದಾವಣಗೆರೆಯಲ್ಲಿ ಅತ್ತೆ-ಅಳಿಯನ ಶಾಕ್ ಲವ್ ಸ್ಟೋರಿ: ಮದುವೆಯಾದ 2 ತಿಂಗಳಲ್ಲೇ ಪತ್ನಿಯನ್ನ ಬಿಟ್ಟು ಎಸ್ಕೇಪ್!

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಬಹುಚರ್ಚಿತ ಮತ್ತು ಅಸಾಮಾನ್ಯ ಘಟನೆ ನಡೆದಿದೆ. 25 ವರ್ಷದ ಯುವಕ ತನ್ನ 55 ವರ್ಷದ ಅತ್ತೆಯೊಂದಿಗೆ ಓಡಿಹೋಗಿರುವ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮದುವೆಯಾದ ಕೇವಲ ಎರಡು ತಿಂಗಳೊಳಗೆ ನಡೆದಿದ್ದು, ಪತ್ನಿ ಆಘಾತಕ್ಕೊಳಗಾಗಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರ ಪ್ರಕಾರ, 25 ವರ್ಷದ ಗಣೇಶ್ ಎಂಬ ಯುವಕ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ನಿವಾಸಿ. ಕೆಲವು ತಿಂಗಳ ಹಿಂದೆ, ಮುದ್ದೇನಹಳ್ಳಿ ಗ್ರಾಮದ ನಾಗರಾಜ್ ಅವರ ಮಗಳು ಹೇಮಾಳೊಂದಿಗೆ ಗಣೇಶ್‌ ವಿವಾಹವಾಗಿದ್ದ. ಈ ಮದುವೆ ನಾಗರಾಜ್ ಅವರ ಎರಡನೇ ಪತ್ನಿ ಶಾಂತಾ ಅವರ ತಯಾರಿಯಲ್ಲಿ ನಡೆದಿದ್ದಂತೆ. ಶಾಂತಾ, 13 ವರ್ಷಗಳ ಹಿಂದೆ ನಾಗರಾಜ್ ಅವರ 2ನೇ ಪತ್ನಿಯಾಗಿ ಮನೆಗೆ ಬಂದಿದ್ದರು.

ಮದುವೆಗೂ ಮುನ್ನ ಶಾಂತಾ, ಗಣೇಶನನ್ನು ಕುಟುಂಬದ ಮನೆಗೆ ತಂದಿದ್ದಲ್ಲದೆ, “ಈತನಿಗೆ ನನ್ನ ಮೊಮ್ಮಗತಿಯನ್ನು ಮದುವೆ ಮಾಡಿಸಿ ಮನೆ ಅಳಿಯನಾಗಿ ಇಲ್ಲಿಯೇ ಇಡುವೆ” ಎಂದು ಕುಟುಂಬಸ್ಥರ ವಿಶ್ವಾಸ ಗೆದ್ದಿದ್ದರು. ಈ ಮಾತಿನಂತೆ, ಎರಡು ತಿಂಗಳ ಹಿಂದಷ್ಟೇ ಹೇಮಾ ಮತ್ತು ಗಣೇಶ್‌ ಮದುವೆಯಾಗಿ ದಾಂಪತ್ಯ ಜೀವನ ಆರಂಭಿಸಿದ್ದರು.

ಆದರೆ ಮದುವೆಯಾದ ಕೇವಲ 15 ದಿನಗಳಲ್ಲೇ, ಹೇಮಾ ತನ್ನ ಪತಿ ಗಣೇಶ್ ಮತ್ತು ತಾಯಿ ಶಾಂತಾ ನಡುವೆ ಅಕ್ರಮ ಸಂಬಂಧವಿರುವ ಅನುಮಾನಕ್ಕೆ ಬಿದ್ದಿದ್ದಾಳೆ. ಗಣೇಶನ ಮೊಬೈಲ್‌ನಲ್ಲಿ ಶಾಂತಾ ಕಳಿಸಿದ್ದ ಅಶ್ಲೀಲ ಸಂದೇಶಗಳು ಪತ್ತೆಯಾಗಿದ್ದು, ಅವುಗಳನ್ನು ಹೇಮಾ ತನ್ನ ತಂದೆ ನಾಗರಾಜ್‌ ಅವರಿಗೆ ತೋರಿಸಿದ್ದಾಳೆ.

ಈ ಘಟನೆ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸಿದ ಬೆನ್ನಲ್ಲೇ, ಶಾಂತಾ ಹಾಗೂ ಗಣೇಶ್ ಹಣ, ಆಭರಣಗಳನ್ನು ತೆಗೆದುಕೊಂಡು ಮನೆ ಬಿಟ್ಟು ಪರಾರಿಯಾಗಿದ್ದಾರೆ. ಚನ್ನಗಿರಿ ಬಸ್ ನಿಲ್ದಾಣದಲ್ಲಿ ಹೇಮಾಳನ್ನ ಬಿಟ್ಟು ಇಬ್ಬರೂ ಎಸ್ಕೇಪ್ ಆಗಿರುವುದು ದೃಢಪಟ್ಟಿದೆ.

ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶಾಂತಾ ಮತ್ತು ಗಣೇಶ್ ವಿರುದ್ಧ ಹುಡುಕಾಟ ಹಾಗೂ ತನಿಖೆ ಆರಂಭಿಸಿದ್ದಾರೆ.

ಈ ರೀತಿಯ ಘಟನೆಗಳು ಮೊದಲೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ವರದಿಯಾಗುತ್ತಿದ್ದರೆ, ಈಗ ಕರ್ನಾಟಕದಲ್ಲೂ ಇಂತಹ ದುರ್ಘಟನೆಗಳು ನಡೆಯುತ್ತಿರುವುದು ಸಾಮಾಜಿಕವಾಗಿ ಆತಂಕಕಾರಿ ಬೆಳವಣಿಗೆ ಎಂಬ ಮಾತುಗಳು ಕೇಳಿಬರುತ್ತಿವೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago