Latest

ದಾವಣಗೆರೆಯಲ್ಲಿ ಅತ್ತೆ-ಅಳಿಯನ ಶಾಕ್ ಲವ್ ಸ್ಟೋರಿ: ಮದುವೆಯಾದ 2 ತಿಂಗಳಲ್ಲೇ ಪತ್ನಿಯನ್ನ ಬಿಟ್ಟು ಎಸ್ಕೇಪ್!

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಬಹುಚರ್ಚಿತ ಮತ್ತು ಅಸಾಮಾನ್ಯ ಘಟನೆ ನಡೆದಿದೆ. 25 ವರ್ಷದ ಯುವಕ ತನ್ನ 55 ವರ್ಷದ ಅತ್ತೆಯೊಂದಿಗೆ ಓಡಿಹೋಗಿರುವ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮದುವೆಯಾದ ಕೇವಲ ಎರಡು ತಿಂಗಳೊಳಗೆ ನಡೆದಿದ್ದು, ಪತ್ನಿ ಆಘಾತಕ್ಕೊಳಗಾಗಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರ ಪ್ರಕಾರ, 25 ವರ್ಷದ ಗಣೇಶ್ ಎಂಬ ಯುವಕ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ನಿವಾಸಿ. ಕೆಲವು ತಿಂಗಳ ಹಿಂದೆ, ಮುದ್ದೇನಹಳ್ಳಿ ಗ್ರಾಮದ ನಾಗರಾಜ್ ಅವರ ಮಗಳು ಹೇಮಾಳೊಂದಿಗೆ ಗಣೇಶ್‌ ವಿವಾಹವಾಗಿದ್ದ. ಈ ಮದುವೆ ನಾಗರಾಜ್ ಅವರ ಎರಡನೇ ಪತ್ನಿ ಶಾಂತಾ ಅವರ ತಯಾರಿಯಲ್ಲಿ ನಡೆದಿದ್ದಂತೆ. ಶಾಂತಾ, 13 ವರ್ಷಗಳ ಹಿಂದೆ ನಾಗರಾಜ್ ಅವರ 2ನೇ ಪತ್ನಿಯಾಗಿ ಮನೆಗೆ ಬಂದಿದ್ದರು.

ಮದುವೆಗೂ ಮುನ್ನ ಶಾಂತಾ, ಗಣೇಶನನ್ನು ಕುಟುಂಬದ ಮನೆಗೆ ತಂದಿದ್ದಲ್ಲದೆ, “ಈತನಿಗೆ ನನ್ನ ಮೊಮ್ಮಗತಿಯನ್ನು ಮದುವೆ ಮಾಡಿಸಿ ಮನೆ ಅಳಿಯನಾಗಿ ಇಲ್ಲಿಯೇ ಇಡುವೆ” ಎಂದು ಕುಟುಂಬಸ್ಥರ ವಿಶ್ವಾಸ ಗೆದ್ದಿದ್ದರು. ಈ ಮಾತಿನಂತೆ, ಎರಡು ತಿಂಗಳ ಹಿಂದಷ್ಟೇ ಹೇಮಾ ಮತ್ತು ಗಣೇಶ್‌ ಮದುವೆಯಾಗಿ ದಾಂಪತ್ಯ ಜೀವನ ಆರಂಭಿಸಿದ್ದರು.

ಆದರೆ ಮದುವೆಯಾದ ಕೇವಲ 15 ದಿನಗಳಲ್ಲೇ, ಹೇಮಾ ತನ್ನ ಪತಿ ಗಣೇಶ್ ಮತ್ತು ತಾಯಿ ಶಾಂತಾ ನಡುವೆ ಅಕ್ರಮ ಸಂಬಂಧವಿರುವ ಅನುಮಾನಕ್ಕೆ ಬಿದ್ದಿದ್ದಾಳೆ. ಗಣೇಶನ ಮೊಬೈಲ್‌ನಲ್ಲಿ ಶಾಂತಾ ಕಳಿಸಿದ್ದ ಅಶ್ಲೀಲ ಸಂದೇಶಗಳು ಪತ್ತೆಯಾಗಿದ್ದು, ಅವುಗಳನ್ನು ಹೇಮಾ ತನ್ನ ತಂದೆ ನಾಗರಾಜ್‌ ಅವರಿಗೆ ತೋರಿಸಿದ್ದಾಳೆ.

ಈ ಘಟನೆ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸಿದ ಬೆನ್ನಲ್ಲೇ, ಶಾಂತಾ ಹಾಗೂ ಗಣೇಶ್ ಹಣ, ಆಭರಣಗಳನ್ನು ತೆಗೆದುಕೊಂಡು ಮನೆ ಬಿಟ್ಟು ಪರಾರಿಯಾಗಿದ್ದಾರೆ. ಚನ್ನಗಿರಿ ಬಸ್ ನಿಲ್ದಾಣದಲ್ಲಿ ಹೇಮಾಳನ್ನ ಬಿಟ್ಟು ಇಬ್ಬರೂ ಎಸ್ಕೇಪ್ ಆಗಿರುವುದು ದೃಢಪಟ್ಟಿದೆ.

ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶಾಂತಾ ಮತ್ತು ಗಣೇಶ್ ವಿರುದ್ಧ ಹುಡುಕಾಟ ಹಾಗೂ ತನಿಖೆ ಆರಂಭಿಸಿದ್ದಾರೆ.

ಈ ರೀತಿಯ ಘಟನೆಗಳು ಮೊದಲೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ವರದಿಯಾಗುತ್ತಿದ್ದರೆ, ಈಗ ಕರ್ನಾಟಕದಲ್ಲೂ ಇಂತಹ ದುರ್ಘಟನೆಗಳು ನಡೆಯುತ್ತಿರುವುದು ಸಾಮಾಜಿಕವಾಗಿ ಆತಂಕಕಾರಿ ಬೆಳವಣಿಗೆ ಎಂಬ ಮಾತುಗಳು ಕೇಳಿಬರುತ್ತಿವೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

6 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

6 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

6 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

6 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

6 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

6 hours ago