Latest

ದಾವಣಗೆರೆಯಲ್ಲಿ ಅತ್ತೆ-ಅಳಿಯನ ಶಾಕ್ ಲವ್ ಸ್ಟೋರಿ: ಮದುವೆಯಾದ 2 ತಿಂಗಳಲ್ಲೇ ಪತ್ನಿಯನ್ನ ಬಿಟ್ಟು ಎಸ್ಕೇಪ್!

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಬಹುಚರ್ಚಿತ ಮತ್ತು ಅಸಾಮಾನ್ಯ ಘಟನೆ ನಡೆದಿದೆ. 25 ವರ್ಷದ ಯುವಕ ತನ್ನ 55 ವರ್ಷದ ಅತ್ತೆಯೊಂದಿಗೆ ಓಡಿಹೋಗಿರುವ ಶಾಕಿಂಗ್ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮದುವೆಯಾದ ಕೇವಲ ಎರಡು ತಿಂಗಳೊಳಗೆ ನಡೆದಿದ್ದು, ಪತ್ನಿ ಆಘಾತಕ್ಕೊಳಗಾಗಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಪೊಲೀಸರ ಪ್ರಕಾರ, 25 ವರ್ಷದ ಗಣೇಶ್ ಎಂಬ ಯುವಕ ಚನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ನಿವಾಸಿ. ಕೆಲವು ತಿಂಗಳ ಹಿಂದೆ, ಮುದ್ದೇನಹಳ್ಳಿ ಗ್ರಾಮದ ನಾಗರಾಜ್ ಅವರ ಮಗಳು ಹೇಮಾಳೊಂದಿಗೆ ಗಣೇಶ್‌ ವಿವಾಹವಾಗಿದ್ದ. ಈ ಮದುವೆ ನಾಗರಾಜ್ ಅವರ ಎರಡನೇ ಪತ್ನಿ ಶಾಂತಾ ಅವರ ತಯಾರಿಯಲ್ಲಿ ನಡೆದಿದ್ದಂತೆ. ಶಾಂತಾ, 13 ವರ್ಷಗಳ ಹಿಂದೆ ನಾಗರಾಜ್ ಅವರ 2ನೇ ಪತ್ನಿಯಾಗಿ ಮನೆಗೆ ಬಂದಿದ್ದರು.

ಮದುವೆಗೂ ಮುನ್ನ ಶಾಂತಾ, ಗಣೇಶನನ್ನು ಕುಟುಂಬದ ಮನೆಗೆ ತಂದಿದ್ದಲ್ಲದೆ, “ಈತನಿಗೆ ನನ್ನ ಮೊಮ್ಮಗತಿಯನ್ನು ಮದುವೆ ಮಾಡಿಸಿ ಮನೆ ಅಳಿಯನಾಗಿ ಇಲ್ಲಿಯೇ ಇಡುವೆ” ಎಂದು ಕುಟುಂಬಸ್ಥರ ವಿಶ್ವಾಸ ಗೆದ್ದಿದ್ದರು. ಈ ಮಾತಿನಂತೆ, ಎರಡು ತಿಂಗಳ ಹಿಂದಷ್ಟೇ ಹೇಮಾ ಮತ್ತು ಗಣೇಶ್‌ ಮದುವೆಯಾಗಿ ದಾಂಪತ್ಯ ಜೀವನ ಆರಂಭಿಸಿದ್ದರು.

ಆದರೆ ಮದುವೆಯಾದ ಕೇವಲ 15 ದಿನಗಳಲ್ಲೇ, ಹೇಮಾ ತನ್ನ ಪತಿ ಗಣೇಶ್ ಮತ್ತು ತಾಯಿ ಶಾಂತಾ ನಡುವೆ ಅಕ್ರಮ ಸಂಬಂಧವಿರುವ ಅನುಮಾನಕ್ಕೆ ಬಿದ್ದಿದ್ದಾಳೆ. ಗಣೇಶನ ಮೊಬೈಲ್‌ನಲ್ಲಿ ಶಾಂತಾ ಕಳಿಸಿದ್ದ ಅಶ್ಲೀಲ ಸಂದೇಶಗಳು ಪತ್ತೆಯಾಗಿದ್ದು, ಅವುಗಳನ್ನು ಹೇಮಾ ತನ್ನ ತಂದೆ ನಾಗರಾಜ್‌ ಅವರಿಗೆ ತೋರಿಸಿದ್ದಾಳೆ.

ಈ ಘಟನೆ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸಿದ ಬೆನ್ನಲ್ಲೇ, ಶಾಂತಾ ಹಾಗೂ ಗಣೇಶ್ ಹಣ, ಆಭರಣಗಳನ್ನು ತೆಗೆದುಕೊಂಡು ಮನೆ ಬಿಟ್ಟು ಪರಾರಿಯಾಗಿದ್ದಾರೆ. ಚನ್ನಗಿರಿ ಬಸ್ ನಿಲ್ದಾಣದಲ್ಲಿ ಹೇಮಾಳನ್ನ ಬಿಟ್ಟು ಇಬ್ಬರೂ ಎಸ್ಕೇಪ್ ಆಗಿರುವುದು ದೃಢಪಟ್ಟಿದೆ.

ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶಾಂತಾ ಮತ್ತು ಗಣೇಶ್ ವಿರುದ್ಧ ಹುಡುಕಾಟ ಹಾಗೂ ತನಿಖೆ ಆರಂಭಿಸಿದ್ದಾರೆ.

ಈ ರೀತಿಯ ಘಟನೆಗಳು ಮೊದಲೇ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ವರದಿಯಾಗುತ್ತಿದ್ದರೆ, ಈಗ ಕರ್ನಾಟಕದಲ್ಲೂ ಇಂತಹ ದುರ್ಘಟನೆಗಳು ನಡೆಯುತ್ತಿರುವುದು ಸಾಮಾಜಿಕವಾಗಿ ಆತಂಕಕಾರಿ ಬೆಳವಣಿಗೆ ಎಂಬ ಮಾತುಗಳು ಕೇಳಿಬರುತ್ತಿವೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

12 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

19 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

19 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago