Latest

ರಿಕ್ಕಿ ರೈ ಮೇಲಿನ ಗುಂಡಿನ ದಾಳಿ: ನಾಲ್ವರ ವಿರುದ್ಧ ಎಫ್‌ಐಆರ್, ಪೊಲೀಸರ ತನಿಖೆ ಚುರುಕು

ರಾಮನಗರ: ಅಂಧಕಾರು ರಾತ್ರಿ ಬೆನ್ನಲ್ಲೇ ನಡೆದ ಗುಂಡಿನ ದಾಳಿ ಪ್ರಕರಣವು ಈಗ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ರಿಯಲ್ ಎಸ್ಟೇಟ್ ಉದ್ಯಮಿ ರಿಕ್ಕಿ ರೈ ನುಣುಪಾಗಿ ಪಾರಾಗಿದ್ದಾರೆ. ಈ ಘಟನೆ ರಾಮನಗರ ತಾಲೂಕಿನ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಧ್ಯರಾತ್ರಿ ವೇಳೆಯಲ್ಲಿ ಬಿಡದಿಯ ರಿಕ್ಕಿ ರೈ ನಿವಾಸದ ಬಳಿ ಗುಂಡಿನ ಸದ್ದು ಕೇಳಿ ಬಂದಿದೆ. ಈ ವೇಳೆ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಫೈರಿಂಗ್ ನಡೆದಿದ್ದು, ಕೂದಲೆಲೆ ಅಂತರದಲ್ಲಿ ಅವರು ಬದುಕುಳಿದಿದ್ದಾರೆ ಎನ್ನಲಾಗಿದೆ. ಘಟನೆಯ ಸಂದರ್ಭದಲ್ಲಿದ್ದ ಬಸವರಾಜ್ ಎಂಬವರು ಕಾರು ಚಲಾಯಿಸುತ್ತಿದ್ದರು. ಅವರಿಂದ ಮಾಹಿತಿ ಪಡೆದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬಸವರಾಜ್ ನೀಡಿದ ದೂರಿನ ಆಧಾರದ ಮೇಲೆ ನಾಲ್ವರಿಗೆ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿತರಾಗಿ ಗುರುತಿಸಲ್ಪಟ್ಟವರು:

A1 ರಾಕೇಶ್ ಮಲ್ಲಿ

A2 ಅನುರಾಧಾ

A3 ನಿತೇಶ್ ಶೆಟ್ಟಿ

A4 ವೈದ್ಯನಾಥನ್

ಈ ನಾಲ್ವರ ಮೇಲೆ ಭಾರತೀಯ ದಂಡ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 109, 3(5) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದು, ಈ ದಾಳಿಯ ಹಿಂದೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದ ಹಿಂದಿನ ವೈಷಮ್ಯವಿರಬಹುದೆಂದು ಶಂಕಿಸಲಾಗಿದೆ. ಇದರೊಂದಿಗೆ ಪೊಲೀಸ್ ತಂಡವು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದು, ರಿಕ್ಕಿ ರೈ ನಿವಾಸದ ಸಿಬ್ಬಂದಿ ಹಾಗೂ ಆಪ್ತರನ್ನು ವಿಚಾರಣೆ ಮಾಡುತ್ತಿದೆ.

ಘಟನೆಯ ಕುರಿತು ಮಾಹಿತಿ ನೀಡಿದ ಕಾರು ಚಾಲಕ ಬಸವರಾಜ್, “ಒಂದು ದೊಡ್ಡ ಸದ್ದು ಕೇಳಿಬಂದಿತು,” ಎಂದು ಹೇಳಿದ್ದು, ಘಟನೆಯ ತೀವ್ರತೆಯ ಬಗ್ಗೆ ಅನುಮಾನ ಹೆಚ್ಚಾಗಿದೆ. ಕಾರಿಗೆ ಏನಾದರೂ ತಾಗಿದೆಯಾ ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಪ್ರಕರಣದ ಹಿನ್ನೆಲೆ ಸ್ಪಷ್ಟವಾಗಿಲ್ಲದಿದ್ದರೂ, ಪೊಲೀಸರು ದಾಳಿಯ ಹಿಂದಿರುವ ನಿಖರ ಕಾರಣ ಪತ್ತೆ ಹಚ್ಚಲು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

19 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

19 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

19 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

19 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago