Latest

ಚಾಕಲೇಟ್ ಕಳವು ಆರೋಪದಲ್ಲಿ ಐದು ಬಾಲಕರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಸಿದ ಅಂಗಡಿ ಮಾಲಿಕ

ಬಿಹಾರ್ ರಾಜ್ಯದ ಸೀತಾರ್ಮಹಿಯ ಮಲ್ಲಾಹಿ ಗ್ರಾಮದಲ್ಲಿ ನಡೆದ ಮಾನವೀಯತೆ ಮರೆತ ಘಟನೆ ಇಡೀ ದೇಶದ ಗಮನಸೆಳೆದಿದೆ. ಒಂದಷ್ಟು ಚಾಕಲೇಟ್ ಕದ್ದಿದ್ದಾರೆ ಎಂಬ ಆರೋಪದ ಮೇಲೆ ಐದು ಬಾಲಕರನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿರುವ ಕ್ರೂರ ಕೃತ್ಯ ನಡೆಯಿತು.

ಬುಧವಾರ ಸಂಜೆ ದಿನಸಿ ಅಂಗಡಿಯೊಂದರಲ್ಲಿ ಕೆಲವು ಬಾಲಕರು ಚಾಕಲೇಟ್ ಕದ್ದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಾದ ನಾಗೇಶ್ವರ ಶರ್ಮಾ, ಐದು ಬಾಲಕರನ್ನು ತನ್ನ ಅಂಗಡಿಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ವೇಳೆ ಒಬ್ಬ ಬಾಲಕ ತಪ್ಪು ಮಾಡಿಕೊಂಡಿದ್ದು, ಈ ವಿಚಾರದಿಂದ ಮತ್ತಷ್ಟು ಆಕ್ರೋಶಗೊಂಡ ಶರ್ಮಾ, ಐದು ಮಕ್ಕಳ ಬಟ್ಟೆ ಬಿಚ್ಚಿಸಿ, ಅವರ ಮುಖಕ್ಕೆ ಬಿಳಿ ಸುಣ್ಣ ಹಚ್ಚಿಸಿ, ಚಪ್ಪಲಿಯನ್ನು ಕುತ್ತಿಗೆಗೆ ಹಾರವಂತೆ ಹಾಕಿದ್ದಾರೆ. ಬಳಿಕ ಎಲ್ಲರನ್ನು ಒಂದೇ ಹಗ್ಗದಲ್ಲಿ ಕಟ್ಟಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ.

ಘಟನೆ ಇಲ್ಲಿಯಲ್ಲೇ ನಿಂತಿಲ್ಲ. ಈ ದೃಶ್ಯಗಳನ್ನು ಶರ್ಮಾ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿ, ತಮ್ಮ ಮಗ ಪ್ರಕಾಶ್ ಕುಮಾರ್ ಮತ್ತು ಗ್ರಾಮಸ್ಥ ಕೃಷ್ಣ ಕುಮಾರ್ ಸಹಾಯದಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ ಸಾರ್ವಜನಿಕರ ಆಕ್ರೋಶ ಜೋರಾಗಿ ವ್ಯಕ್ತವಾಯಿತು. ಸ್ಥಳೀಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಈಗಾಗಲೇ ನಿಂದಿತರಾದ ನಾಗೇಶ್ವರ ಶರ್ಮಾ, ಅವರ ಮಗ ಪ್ರಕಾಶ್ ಕುಮಾರ್ ಹಾಗೂ ಕೃಷ್ಣ ಕುಮಾರ್ ಅವರನ್ನು ಬಂಧಿಸಿದ್ದಾರೆ.

ಈ ಘಟನೆಯಿಂದ ಮಕ್ಕಳ ಮೇಲಿನ ಹಿಂಸೆ ಮತ್ತು ಅವಮಾನಕಾರಿ ನಡೆಗಳನ್ನು ತಡೆಗಟ್ಟಲು ಕಠಿಣ ಕ್ರಮ ಅಗತ್ಯ ಎಂಬ ಚರ್ಚೆಗೆ ಮೂಲ ನೀಡಿದ್ದು, ಕಾನೂನಿನಡಿಯಲ್ಲಿ ತಕ್ಷಣದ ಕಠಿಣ ಶಿಕ್ಷೆ ನೀಡಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

14 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

19 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

19 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

19 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

19 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago