Latest

ಚಾಕಲೇಟ್ ಕಳವು ಆರೋಪದಲ್ಲಿ ಐದು ಬಾಲಕರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಸಿದ ಅಂಗಡಿ ಮಾಲಿಕ

ಬಿಹಾರ್ ರಾಜ್ಯದ ಸೀತಾರ್ಮಹಿಯ ಮಲ್ಲಾಹಿ ಗ್ರಾಮದಲ್ಲಿ ನಡೆದ ಮಾನವೀಯತೆ ಮರೆತ ಘಟನೆ ಇಡೀ ದೇಶದ ಗಮನಸೆಳೆದಿದೆ. ಒಂದಷ್ಟು ಚಾಕಲೇಟ್ ಕದ್ದಿದ್ದಾರೆ ಎಂಬ ಆರೋಪದ ಮೇಲೆ ಐದು ಬಾಲಕರನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿರುವ ಕ್ರೂರ ಕೃತ್ಯ ನಡೆಯಿತು.

ಬುಧವಾರ ಸಂಜೆ ದಿನಸಿ ಅಂಗಡಿಯೊಂದರಲ್ಲಿ ಕೆಲವು ಬಾಲಕರು ಚಾಕಲೇಟ್ ಕದ್ದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಾದ ನಾಗೇಶ್ವರ ಶರ್ಮಾ, ಐದು ಬಾಲಕರನ್ನು ತನ್ನ ಅಂಗಡಿಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ವೇಳೆ ಒಬ್ಬ ಬಾಲಕ ತಪ್ಪು ಮಾಡಿಕೊಂಡಿದ್ದು, ಈ ವಿಚಾರದಿಂದ ಮತ್ತಷ್ಟು ಆಕ್ರೋಶಗೊಂಡ ಶರ್ಮಾ, ಐದು ಮಕ್ಕಳ ಬಟ್ಟೆ ಬಿಚ್ಚಿಸಿ, ಅವರ ಮುಖಕ್ಕೆ ಬಿಳಿ ಸುಣ್ಣ ಹಚ್ಚಿಸಿ, ಚಪ್ಪಲಿಯನ್ನು ಕುತ್ತಿಗೆಗೆ ಹಾರವಂತೆ ಹಾಕಿದ್ದಾರೆ. ಬಳಿಕ ಎಲ್ಲರನ್ನು ಒಂದೇ ಹಗ್ಗದಲ್ಲಿ ಕಟ್ಟಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ.

ಘಟನೆ ಇಲ್ಲಿಯಲ್ಲೇ ನಿಂತಿಲ್ಲ. ಈ ದೃಶ್ಯಗಳನ್ನು ಶರ್ಮಾ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿ, ತಮ್ಮ ಮಗ ಪ್ರಕಾಶ್ ಕುಮಾರ್ ಮತ್ತು ಗ್ರಾಮಸ್ಥ ಕೃಷ್ಣ ಕುಮಾರ್ ಸಹಾಯದಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ ಸಾರ್ವಜನಿಕರ ಆಕ್ರೋಶ ಜೋರಾಗಿ ವ್ಯಕ್ತವಾಯಿತು. ಸ್ಥಳೀಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಈಗಾಗಲೇ ನಿಂದಿತರಾದ ನಾಗೇಶ್ವರ ಶರ್ಮಾ, ಅವರ ಮಗ ಪ್ರಕಾಶ್ ಕುಮಾರ್ ಹಾಗೂ ಕೃಷ್ಣ ಕುಮಾರ್ ಅವರನ್ನು ಬಂಧಿಸಿದ್ದಾರೆ.

ಈ ಘಟನೆಯಿಂದ ಮಕ್ಕಳ ಮೇಲಿನ ಹಿಂಸೆ ಮತ್ತು ಅವಮಾನಕಾರಿ ನಡೆಗಳನ್ನು ತಡೆಗಟ್ಟಲು ಕಠಿಣ ಕ್ರಮ ಅಗತ್ಯ ಎಂಬ ಚರ್ಚೆಗೆ ಮೂಲ ನೀಡಿದ್ದು, ಕಾನೂನಿನಡಿಯಲ್ಲಿ ತಕ್ಷಣದ ಕಠಿಣ ಶಿಕ್ಷೆ ನೀಡಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago