ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಅಂಗಡಿ ಜಾಗದ ವಿಚಾರವಾಗಿ ಉದ್ಭವಿಸಿದ ವೈಷಮ್ಯ ಪರಾಕಾಷ್ಠೆಗೆ ತಲುಪಿದ್ದು, ಎರಡು ಗುಂಪುಗಳು ನಡು ರಸ್ತೆಯಲ್ಲೇ ಪರಸ್ಪರ ಹಲ್ಲೆಗೆ ಇಳಿದಿರುವ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರ ಹೇಳಿಕೆಯಂತೆ, ಅಂಗಡಿಯ ಜಾಗಕ್ಕಾಗಿ ಉಂಟಾದ ವಿವಾದ ತೀವ್ರ ರೂಪ ಪಡೆದು, ಎರಡು ಗುಂಪುಗಳು ರಾಡ್ಗಳು ಸೇರಿದಂತೆ ತೀವ್ರವಾಗಿ ಪರಸ್ಪರ ಹಲ್ಲೆ ನಡೆಸಿದವು. ಈ ಗಲಾಟೆಯಲ್ಲಿ ಮಹಿಳೆಯರು ಕೂಡ ಭಾಗವಹಿಸಿದ್ದು, ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ.
ಘಟನೆಯಲ್ಲಿ ಅಪೀಸ್ ವುಲ್ಲಾಖಾನ್ ಎಂಬುವರ ಮೇಲೆ ಸುಲ್ತಾನ್, ಕೌಸರ್, ಅಲೀಮ್, ನಿಸಾಮ್ ಹಾಗೂ ಇರ್ಪಾನ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪ ಕೇಳಿ ಬಂದಿದೆ. ಈ ಗಲಾಟೆಯಲ್ಲಿ ಎರಡೂ ಗುಂಪಿನ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಂತಾಮಣಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಗ್ರಾಮದ ಶಾಂತತೆಗೆ ಧಕ್ಕೆಯಾದ ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…
ಬೆಂಗಳೂರು ನಗರದ ಎಲೆಕ್ಟ್ರಾನಿಕ್ಸ್ ಸಿಟಿ 2ನೇ ಹಂತದಲ್ಲಿ ಖಾಸಗಿ ಜಾಗ ಪ್ರವೇಶ ವಿಚಾರವಾಗಿ ಆರಂಭವಾದ ವಾಗ್ವಾದ ಚಾಕು ದಾಳಿಗೆ ತಿರುಗಿ,…
ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ.…