ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಅಂಗಡಿ ಜಾಗದ ವಿಚಾರವಾಗಿ ಉದ್ಭವಿಸಿದ ವೈಷಮ್ಯ ಪರಾಕಾಷ್ಠೆಗೆ ತಲುಪಿದ್ದು, ಎರಡು ಗುಂಪುಗಳು ನಡು ರಸ್ತೆಯಲ್ಲೇ ಪರಸ್ಪರ ಹಲ್ಲೆಗೆ ಇಳಿದಿರುವ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರ ಹೇಳಿಕೆಯಂತೆ, ಅಂಗಡಿಯ ಜಾಗಕ್ಕಾಗಿ ಉಂಟಾದ ವಿವಾದ ತೀವ್ರ ರೂಪ ಪಡೆದು, ಎರಡು ಗುಂಪುಗಳು ರಾಡ್ಗಳು ಸೇರಿದಂತೆ ತೀವ್ರವಾಗಿ ಪರಸ್ಪರ ಹಲ್ಲೆ ನಡೆಸಿದವು. ಈ ಗಲಾಟೆಯಲ್ಲಿ ಮಹಿಳೆಯರು ಕೂಡ ಭಾಗವಹಿಸಿದ್ದು, ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ.
ಘಟನೆಯಲ್ಲಿ ಅಪೀಸ್ ವುಲ್ಲಾಖಾನ್ ಎಂಬುವರ ಮೇಲೆ ಸುಲ್ತಾನ್, ಕೌಸರ್, ಅಲೀಮ್, ನಿಸಾಮ್ ಹಾಗೂ ಇರ್ಪಾನ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪ ಕೇಳಿ ಬಂದಿದೆ. ಈ ಗಲಾಟೆಯಲ್ಲಿ ಎರಡೂ ಗುಂಪಿನ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಂತಾಮಣಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಗ್ರಾಮದ ಶಾಂತತೆಗೆ ಧಕ್ಕೆಯಾದ ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…