Latest

ಚನ್ನರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ: ರೋಗಿಗಳಿಗೆ ವೈದ್ಯಕೀಯ ಸೇವೆಯಲ್ಲಿ ವಿಳಂಬ”

ಚನ್ನರಾಯಪಟ್ಟಣ ತಾಲ್ಲೂಕಿನ ಹೋಬಳಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಸೇವೆಗಳ ಹಾಜರಾತಿ ಸಮಸ್ಯೆ ಉಂಟಾಗಿದೆ. ಆಸ್ಪತ್ರೆಗೆ ಬರುವ ಬಡ ರೋಗಿಗಳು, ವೈದ್ಯಕೀಯ ಸೇವೆಗಾಗಿ ಅಧಿಕಾರಿಗಳನ್ನು ಹುಡುಕಿದರೂ, ಸಕಾಲದಲ್ಲಿ ವೈದ್ಯಕೀಯ ಸಿಬ್ಬಂದಿ ಲಭ್ಯವಿಲ್ಲ. ಹಾಜರಾತಿ ಪುಸ್ತಕದಲ್ಲಿ ಮೂವರು ಸಿಬ್ಬಂದಿಯ ಸಹಿಯಿದ್ದರೂ, ಕೆಲಸ ಮಾಡುವವರು ಒಂದೇ ವ್ಯಕ್ತಿ ಎಂಬುದು ಬಹಿರಂಗವಾಗಿದೆ. ಈ ಕಾರಣದಿಂದಾಗಿ, ಆಸ್ಪತ್ರೆಗೆ ಬಂದ ಕೆಲವರು ಮಾತ್ರೆಗಳನ್ನು ಪಡೆದು ಹಿಂತಿರುಗುತ್ತಿದ್ದಾರೆ, ಆದರೆ ಸೂಕ್ತ ವೈದ್ಯಕೀಯ ಪರಿಹಾರ ದೊರೆಯುತ್ತಿಲ್ಲ.

ಪ್ರಾಥಮಿಕ ಆರೋಗ್ಯ ಕೇಂದ್ರವು ಬಹುಮಹಡಿಯ ವೆಚ್ಚದಲ್ಲಿ ಆರಂಭಿಸಲಾಗಿದೆ, ಆದರೆ ವೈದ್ಯಕೀಯ ಸಿಬ್ಬಂದಿಯ ಅನಧಿಕೃತ ಗೈರು ಕಾರಣ, ಬಡ ರೋಗಿಗಳು ತೊಂದರೆಯನ್ನು ಅನುಭವಿಸುತ್ತಿದ್ದಾರೆ.

ಯಲಿಯೂರಿನ ಭಾಗ್ಯವಂತ್, ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ರು. “ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದಾಗ ಮೂವರು ಸಿಬ್ಬಂದಿ ಸಹಿ ಹಾಕಿದ್ದರೂ, ಕೇವಲ ಒಬ್ಬರೇ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕರ್ತವ್ಯದಲ್ಲಿದ್ದ ಸಿಬ್ಬಂದಿ, “ಮಧ್ಯಾಹ್ನ 3ರವರೆಗೆ ಎಲ್ಲಾ ಸಿಬ್ಬಂದಿ ಇದ್ದರು. ಈಗ ಅವರು ಹೊರಗಿನ ಕೆಲಸಕ್ಕೆ ತೆರಳಿದ್ದಾರೆ. ಅವರ ಹತ್ತಿರಗೆ ಹೋಗಿದ್ದು ನನಗೆ ಗೊತ್ತಿಲ್ಲ” ಎಂದರು.

ಈ ಬಗ್ಗೆ ಸ್ಥಳೀಯ ‘ಪ್ರಧಾನ’ ಸಂಸ್ಥೆಯಿಂದ ಪ್ರತಿಕ್ರಿಯಿಸಿದ ತಾಲ್ಲೂಕು ವೈದ್ಯಾಧಿಕಾರಿ ಸಂಜಯ್‌ ಅವರು, “ಈ ಆರೋಗ್ಯ ಕೇಂದ್ರಕ್ಕೆ ನಿಯೋಜಿತ ವೈದ್ಯಾಧಿಕಾರಿ ರಜೆಗೆ ತೆರಳಿದ್ದಾರೆ. ಅವರ ಜಾಗಕ್ಕೆ ಇನ್ನೊಬ್ಬ ವೈದ್ಯಕೀಯ ಸಿಬ್ಬಂದಿಯನ್ನು ತ್ವರಿತವಾಗಿ ನಿಯೋಜಿಸಲಾಗುವುದು. ಈ ಸಮಯದಲ್ಲಿ, ರೋಗಿಗಳಿಗೆ ಯಾವುದೇ ವಿಧವಾದ ವೈದ್ಯಕೀಯ ಸೇವೆಯಲ್ಲಿ ಅಡಚಣೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

nazeer ahamad

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 hour ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

3 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago