Latest

ಚನ್ನರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ: ರೋಗಿಗಳಿಗೆ ವೈದ್ಯಕೀಯ ಸೇವೆಯಲ್ಲಿ ವಿಳಂಬ”

ಚನ್ನರಾಯಪಟ್ಟಣ ತಾಲ್ಲೂಕಿನ ಹೋಬಳಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಸೇವೆಗಳ ಹಾಜರಾತಿ ಸಮಸ್ಯೆ ಉಂಟಾಗಿದೆ. ಆಸ್ಪತ್ರೆಗೆ ಬರುವ ಬಡ ರೋಗಿಗಳು, ವೈದ್ಯಕೀಯ ಸೇವೆಗಾಗಿ ಅಧಿಕಾರಿಗಳನ್ನು ಹುಡುಕಿದರೂ, ಸಕಾಲದಲ್ಲಿ ವೈದ್ಯಕೀಯ ಸಿಬ್ಬಂದಿ ಲಭ್ಯವಿಲ್ಲ. ಹಾಜರಾತಿ ಪುಸ್ತಕದಲ್ಲಿ ಮೂವರು ಸಿಬ್ಬಂದಿಯ ಸಹಿಯಿದ್ದರೂ, ಕೆಲಸ ಮಾಡುವವರು ಒಂದೇ ವ್ಯಕ್ತಿ ಎಂಬುದು ಬಹಿರಂಗವಾಗಿದೆ. ಈ ಕಾರಣದಿಂದಾಗಿ, ಆಸ್ಪತ್ರೆಗೆ ಬಂದ ಕೆಲವರು ಮಾತ್ರೆಗಳನ್ನು ಪಡೆದು ಹಿಂತಿರುಗುತ್ತಿದ್ದಾರೆ, ಆದರೆ ಸೂಕ್ತ ವೈದ್ಯಕೀಯ ಪರಿಹಾರ ದೊರೆಯುತ್ತಿಲ್ಲ.

ಪ್ರಾಥಮಿಕ ಆರೋಗ್ಯ ಕೇಂದ್ರವು ಬಹುಮಹಡಿಯ ವೆಚ್ಚದಲ್ಲಿ ಆರಂಭಿಸಲಾಗಿದೆ, ಆದರೆ ವೈದ್ಯಕೀಯ ಸಿಬ್ಬಂದಿಯ ಅನಧಿಕೃತ ಗೈರು ಕಾರಣ, ಬಡ ರೋಗಿಗಳು ತೊಂದರೆಯನ್ನು ಅನುಭವಿಸುತ್ತಿದ್ದಾರೆ.

ಯಲಿಯೂರಿನ ಭಾಗ್ಯವಂತ್, ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ರು. “ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದಾಗ ಮೂವರು ಸಿಬ್ಬಂದಿ ಸಹಿ ಹಾಕಿದ್ದರೂ, ಕೇವಲ ಒಬ್ಬರೇ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕರ್ತವ್ಯದಲ್ಲಿದ್ದ ಸಿಬ್ಬಂದಿ, “ಮಧ್ಯಾಹ್ನ 3ರವರೆಗೆ ಎಲ್ಲಾ ಸಿಬ್ಬಂದಿ ಇದ್ದರು. ಈಗ ಅವರು ಹೊರಗಿನ ಕೆಲಸಕ್ಕೆ ತೆರಳಿದ್ದಾರೆ. ಅವರ ಹತ್ತಿರಗೆ ಹೋಗಿದ್ದು ನನಗೆ ಗೊತ್ತಿಲ್ಲ” ಎಂದರು.

ಈ ಬಗ್ಗೆ ಸ್ಥಳೀಯ ‘ಪ್ರಧಾನ’ ಸಂಸ್ಥೆಯಿಂದ ಪ್ರತಿಕ್ರಿಯಿಸಿದ ತಾಲ್ಲೂಕು ವೈದ್ಯಾಧಿಕಾರಿ ಸಂಜಯ್‌ ಅವರು, “ಈ ಆರೋಗ್ಯ ಕೇಂದ್ರಕ್ಕೆ ನಿಯೋಜಿತ ವೈದ್ಯಾಧಿಕಾರಿ ರಜೆಗೆ ತೆರಳಿದ್ದಾರೆ. ಅವರ ಜಾಗಕ್ಕೆ ಇನ್ನೊಬ್ಬ ವೈದ್ಯಕೀಯ ಸಿಬ್ಬಂದಿಯನ್ನು ತ್ವರಿತವಾಗಿ ನಿಯೋಜಿಸಲಾಗುವುದು. ಈ ಸಮಯದಲ್ಲಿ, ರೋಗಿಗಳಿಗೆ ಯಾವುದೇ ವಿಧವಾದ ವೈದ್ಯಕೀಯ ಸೇವೆಯಲ್ಲಿ ಅಡಚಣೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

9 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

9 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

12 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

14 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

14 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

14 hours ago