Latest

ಚನ್ನರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ: ರೋಗಿಗಳಿಗೆ ವೈದ್ಯಕೀಯ ಸೇವೆಯಲ್ಲಿ ವಿಳಂಬ”

ಚನ್ನರಾಯಪಟ್ಟಣ ತಾಲ್ಲೂಕಿನ ಹೋಬಳಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಸೇವೆಗಳ ಹಾಜರಾತಿ ಸಮಸ್ಯೆ ಉಂಟಾಗಿದೆ. ಆಸ್ಪತ್ರೆಗೆ ಬರುವ ಬಡ ರೋಗಿಗಳು, ವೈದ್ಯಕೀಯ ಸೇವೆಗಾಗಿ ಅಧಿಕಾರಿಗಳನ್ನು ಹುಡುಕಿದರೂ, ಸಕಾಲದಲ್ಲಿ ವೈದ್ಯಕೀಯ ಸಿಬ್ಬಂದಿ ಲಭ್ಯವಿಲ್ಲ. ಹಾಜರಾತಿ ಪುಸ್ತಕದಲ್ಲಿ ಮೂವರು ಸಿಬ್ಬಂದಿಯ ಸಹಿಯಿದ್ದರೂ, ಕೆಲಸ ಮಾಡುವವರು ಒಂದೇ ವ್ಯಕ್ತಿ ಎಂಬುದು ಬಹಿರಂಗವಾಗಿದೆ. ಈ ಕಾರಣದಿಂದಾಗಿ, ಆಸ್ಪತ್ರೆಗೆ ಬಂದ ಕೆಲವರು ಮಾತ್ರೆಗಳನ್ನು ಪಡೆದು ಹಿಂತಿರುಗುತ್ತಿದ್ದಾರೆ, ಆದರೆ ಸೂಕ್ತ ವೈದ್ಯಕೀಯ ಪರಿಹಾರ ದೊರೆಯುತ್ತಿಲ್ಲ.

ಪ್ರಾಥಮಿಕ ಆರೋಗ್ಯ ಕೇಂದ್ರವು ಬಹುಮಹಡಿಯ ವೆಚ್ಚದಲ್ಲಿ ಆರಂಭಿಸಲಾಗಿದೆ, ಆದರೆ ವೈದ್ಯಕೀಯ ಸಿಬ್ಬಂದಿಯ ಅನಧಿಕೃತ ಗೈರು ಕಾರಣ, ಬಡ ರೋಗಿಗಳು ತೊಂದರೆಯನ್ನು ಅನುಭವಿಸುತ್ತಿದ್ದಾರೆ.

ಯಲಿಯೂರಿನ ಭಾಗ್ಯವಂತ್, ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ರು. “ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದಾಗ ಮೂವರು ಸಿಬ್ಬಂದಿ ಸಹಿ ಹಾಕಿದ್ದರೂ, ಕೇವಲ ಒಬ್ಬರೇ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕರ್ತವ್ಯದಲ್ಲಿದ್ದ ಸಿಬ್ಬಂದಿ, “ಮಧ್ಯಾಹ್ನ 3ರವರೆಗೆ ಎಲ್ಲಾ ಸಿಬ್ಬಂದಿ ಇದ್ದರು. ಈಗ ಅವರು ಹೊರಗಿನ ಕೆಲಸಕ್ಕೆ ತೆರಳಿದ್ದಾರೆ. ಅವರ ಹತ್ತಿರಗೆ ಹೋಗಿದ್ದು ನನಗೆ ಗೊತ್ತಿಲ್ಲ” ಎಂದರು.

ಈ ಬಗ್ಗೆ ಸ್ಥಳೀಯ ‘ಪ್ರಧಾನ’ ಸಂಸ್ಥೆಯಿಂದ ಪ್ರತಿಕ್ರಿಯಿಸಿದ ತಾಲ್ಲೂಕು ವೈದ್ಯಾಧಿಕಾರಿ ಸಂಜಯ್‌ ಅವರು, “ಈ ಆರೋಗ್ಯ ಕೇಂದ್ರಕ್ಕೆ ನಿಯೋಜಿತ ವೈದ್ಯಾಧಿಕಾರಿ ರಜೆಗೆ ತೆರಳಿದ್ದಾರೆ. ಅವರ ಜಾಗಕ್ಕೆ ಇನ್ನೊಬ್ಬ ವೈದ್ಯಕೀಯ ಸಿಬ್ಬಂದಿಯನ್ನು ತ್ವರಿತವಾಗಿ ನಿಯೋಜಿಸಲಾಗುವುದು. ಈ ಸಮಯದಲ್ಲಿ, ರೋಗಿಗಳಿಗೆ ಯಾವುದೇ ವಿಧವಾದ ವೈದ್ಯಕೀಯ ಸೇವೆಯಲ್ಲಿ ಅಡಚಣೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

3 minutes ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

4 minutes ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

5 minutes ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

7 minutes ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

15 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

15 hours ago