Latest

‘Eleven’ ಬರೆದು ತೋರಿಸು ಎಂದರೆ ‘Even’ ಬರೆದ ಸರ್ಕಾರಿ ಶಾಲಾ ಶಿಕ್ಷಕ.!

ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಒಂದು ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ.‌ ಕೆಲವರು ಸರ್ಕಾರಿ ಕೆಲಸ ಪಡೆಯಲು ವರ್ಷವಾರು ಹೋರಾಟ ನಡೆಸುತ್ತಾ ಓದುತ್ತಾರೆ. ಸರ್ಕಾರದ ನೌಕರಿ ಸಿಕ್ಕರೆ ಬದುಕು ಸ್ಥಿರವಾಗುತ್ತದೆ ಎಂಬ ಭ್ರಮೆಯಲ್ಲಿರುವವರು ಅನೇಕರಿದ್ದಾರೆ. ಆದರೆ, ಕೆಲ ಸರ್ಕಾರಿ ನೌಕರರ ದುಡಿಯುವ ಮಾನದಂಡ ಮತ್ತು ಅವರ ಅರ್ಹತೆ ನಡುವೆ ಭಾರಿ ಅಂತರವಿರುವುದನ್ನು ಈ ಘಟನೆಯು ಮತ್ತೆ ನೆನಪಿಸುತ್ತದೆ.

ಬಲರಾಂಪುರ ಜಿಲ್ಲೆಯ ಸರ್ಕಾರಿ ಶಾಲೆಗೆ ದೈಹಿಕವಾಗಿ ಪರಿಶೀಲನೆ ನಡೆಸಲು ಸ್ಥಳೀಯ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದಾಗ, ಅಲ್ಲೊಬ್ಬ ಶಿಕ್ಷಕರಿಗೆ ಬ್ಲ್ಯಾಕ್‌ಬೋರ್ಡ್ ಮೇಲೆ “eleven” ಎಂಬ ಪದದ ಸ್ಪೆಲ್ಲಿಂಗ್ ಬರೆಯಲು ಕೇಳಿದರು. ಅಚ್ಚರಿ ಎಂದರೆ, ಆ ಶಿಕ್ಷಕರು “eleven” ಬದಲು “even” ಎಂದು ಬರೆಯುವ ಮೂಲಕ ತಮ್ಮ ಅಕ್ಷರಜ್ಞಾನವಿಲ್ಲದ ನೈಜತೆ ಬಹಿರಂಗ ಪಡಿಸಿದರು!

ಇದೀಗ ದೇಶದಾದ್ಯಂತ ಈ ವಿಷಯ ಚರ್ಚೆಗೆ ಗ್ರಾಸವಾಗಿದೆ. ವಿಡಿಯೋದಲ್ಲಿನ ದೃಶ್ಯದಲ್ಲಿ, ಶಿಕ್ಷಕರಿಗೆ ಅವರ ತಪ್ಪನ್ನು ಹೇಳಿದರೂ ಸಹ ಅವರು ತಮ್ಮ ತಪ್ಪನ್ನು ಅರಿಯದೇ ಇರಲು ಇಚ್ಛಿಸುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ.

ಅಲ್ಲಿದ್ದ ಇತರ ಶಿಕ್ಷಕರೂ ಸಹ ತಪ್ಪು ಸ್ಪೆಲ್ಲಿಂಗ್ ಅನ್ನು ಸಮರ್ಥಿಸಿಕೊಂಡಿರುವ ದೃಶ್ಯಗಳು ಆಘಾತಕ್ಕೆ ಕಾರಣವಾಗಿವೆ. ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮಟ್ಟದ ಪದಗಳ ಜ್ಞಾನ ಕಲಿಸಲು ಬೇಕಾಗುವ ತಕ್ಕಮಟ್ಟದ ಅರ್ಹತೆ ಇಲ್ಲದವರೇ ಶಿಕ್ಷಕರಾಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಶಿಕ್ಷಕ ನಿತ್ಯವೇ 70,000 ರೂ. ಸಂಬಳ ಪಡೆಯುತ್ತಿದ್ದಾರೆ ಎಂಬ ಮಾಹಿತಿ ವೈರಲ್ ಆದ ನಂತರ, ಸಾರ್ವಜನಿಕರು ಪ್ರಶ್ನೆ ಎತ್ತಿದ್ದಾರೆ – “ಅಂತಹವರು ಮಕ್ಕಳ ಭವಿಷ್ಯ ನಿರ್ಮಾಣ ಮಾಡಬೇಕೆ?”

ಸರ್ಕಾರಿ ಶಾಲೆಗಳ ಗುಣಮಟ್ಟ, ಶಿಕ್ಷಕರ ಅರ್ಹತೆ ಮತ್ತು ನೇಮಕಾತಿ ವಿಧಾನಗಳ ಕುರಿತಾದ ಭಾರೀ ಚರ್ಚೆ ಈ ವಿಡಿಯೋ ಹಿನ್ನೆಲೆಯಲ್ಲಿ ಮತ್ತೆ ಪ್ರಾರಂಭವಾಗಿದೆ. ಶಿಕ್ಷಣ ಇಲಾಖೆ ಈ ಬಗ್ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲವಾದರೂ, ಸಾರ್ವಜನಿಕ ಒತ್ತಡದ ಮಧ್ಯೆ ಕ್ರಮ ಕೈಗೊಳ್ಳಬೇಕಾಗುವ ಸಾಧ್ಯತೆ ಹೆಚ್ಚಾಗಿದೆ.

 

nazeer ahamad

Recent Posts

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

1 hour ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

2 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

2 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

12 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

12 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

15 hours ago