Latest

ಶ್ರದ್ಧಾ ತಲೆಯನ್ನು ಫ್ರಿಜ್ಜಿನಲ್ಲಿಟ್ಟು ಪ್ರತಿದಿನ ನೋಡುತ್ತಿದ್ದ ಸೈಕೋ

ದಿನೇ ದಿನೆ ದೆಹಲಿಯ ಶ್ರದ್ಧಾ ಹತ್ಯೆಯ ಭೀಕರ ವಿವರಗಳು ಬಿಚ್ಚಿಕೊಳ್ಳುತ್ತಿವೆ. ಶ್ರದ್ಧಾ ದೇಹವನ್ನು ಆಕೆಯ ಸೈಕೋ ಪ್ರಿಯಕರ 35 ತುಂಡುಗಳಾಗಿ ಕತ್ತರಿಸಿ ಎಸೆದಿದ್ದು, ಅದರಲ್ಲಿ ಕೆಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇನ್ನೂ ಹಲವಾರು ತುಣುಕುಗಳಿಗಾಗಿ ಹುಡುಕಾಟ ನಡೆದಿದೆ. ಆಕೆಯ ತಲೆ ಇನ್ನೂ ಸಿಕ್ಕಿಲ್ಲ. ಅದು ದೊರೆತರೆ ಅಪರಾಧವನ್ನು ಸಾಕ್ಷೀಕರಿಸುವ ಗುರುತರ ಪುರಾವೆ ಲಭ್ಯವಾದಂತಾಗಲಿದೆ. ತುಣುಕುಗಳನ್ನು ಎಸೆದ ಪ್ರದೇಶಗಳಲ್ಲಿ ಅಫ್ತಾಬ್‌ನನ್ನು ಕರೆದುಕೊಂಡು ಹೋಗಿ ಪೊಲೀಸರು ತಲಾಶೆ ನಡೆಸುತ್ತಿದ್ದಾರೆ.
ಪ್ರತಿದಿನ ರಾತ್ರಿ 2 ಗಂಟೆಗೆ ಹೊರಗೆ ಹೋಗಿ ಶ್ರದ್ಧಾ ದೇಹದ ಒಂದೆರಡು ತುಣುಕನ್ನು ಎಸೆದು ಬರುತ್ತಿದ್ದ ಅಫ್ತಾಬ್‌, ತಲೆಯನ್ನು ಕತ್ತರಿಸಲು ಸಫಲನಾಗಿರಲಿಲ್ಲ. ಹೀಗಾಗಿ ಅದನ್ನು ಫ್ರಿಜ್‌ನಲ್ಲಿಟ್ಟಿದ್ದು. ʼʼಪ್ರತಿದಿನ ಅದನ್ನು ತೆಗೆದು, ನಮ್ಮ ಸಂಬಂಧದ ನೆನಪಿಗಾಗಿ ನೋಡಿಕೊಳ್ಳುತ್ತಿದ್ದೆʼʼ ಎಂದು ಪೊಲೀಸರಿಗೆ ಹೇಳಿದ್ದಾನೆ. ಎಲ್ಲ ತುಣುಕುಗಳನ್ನೂ ಎಸೆದ ಬಳಿಕ ಕೊನೆಯದಾಗಿ ತಲೆಯನ್ನು ಈತ ಬಿಸಾಡಿದ್ದ.
ತಲೆಬುರುಡೆ ದೊರೆತ ಬಳಿಕ ತಲೆಬುರುಡೆಯ ಸೂಪರ್ಇಂಪೊಸಿಷನ್ ತಂತ್ರಜ್ಞಾನ ಮೂಲಕ ಹತ್ಯೆಯಾದವಳ ಗುರುತನ್ನು ರುಜುವಾತುಪಡಿಸಲು ಪೊಲೀಸರಿಗೆ ಸಾಧ್ಯವಾಗಲಿದೆ. ಸದ್ಯ ಪೊಲೀಸರ ಬಳಿ ಇರುವ ಪುರಾವೆ ಎಂದರೆ ದೇಹದ ತುಣುಕುಗಳಿಗೂ ಶ್ರದ್ಧಾ ತಂದೆ ವಿಕಾಸ್‌ ವಾಕರ್‌ಗೂ ಇರುವ ಡಿಎನ್‌ಎ ಹೋಲಿಕೆ ಮಾತ್ರ. ಮೂಳೆಗಳನ್ನು ಡಿಎನ್‌ಎ ಸ್ಯಾಂಪಲಿಂಗ್‌ಗೆ ಕಳಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.
ಕೃತ್ಯ ನಡೆಸಿದ ಬಳಿಕ ಮನೆಯನ್ನು ಕ್ಲೀನ್‌ ಮಾಡಲು, ದೇಹದ ತುಂಡುಗಳನ್ನು ಶೇಖರಿಸಲು ಕೀಚಕ ಅಫ್ತಾಬ್‌ ಬೋರಿಕ್‌ ಪೌಡರ್‌, ಫಾರ್ಮಾಲ್ಡಿಹೈಡ್‌, ಸಲ್ಫ್ಯೂರಿಕ್‌ ಆಮ್ಲ ಮತ್ತಿತರ ಕೆಮಿಕಲ್‌ಗಳನ್ನು ಬಳಸಿದ್ದಾನೆ. ಕೃತ್ಯ ನಡೆದು ಆರು ತಿಂಗಳಾಗಿರುವುದರಿಂದ ಸ್ಥಳ ಮಹಜರಿನಲ್ಲಿ ಗುರುತರ ಸಾಕ್ಷ್ಯಗಳಿಗಾಗಿ ಫಾರೆನ್ಸಿಕ್‌ ತಂಡವನ್ನು ಪೊಲೀಸರು ಅವಲಂಬಿಸಿದ್ದಾರೆ. ಅಫ್ತಾಬ್‌ ಕೂಡ ಕ್ಷಣಕ್ಕೊಂದು ಹೇಳಿಕೆ ನೀಡಿ, ಕೆಲವನ್ನು ಮರೆತುಬಿಟ್ಟಂತೆ ನಟಿಸಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾನೆ.
ಎರಡು ಮೂರು ದಿನಗಳಿಂದ ಪೊಲೀಸ್‌ ಕಸ್ಟಡಿಯಲ್ಲಿರುವ ಅಫ್ತಾಬ್‌, ಹೊಟ್ಟೆ ತುಂಬಾ ಆಹಾರ ಸೇವಿಸಿ ಯಾವುದೇ ಪಶ್ಚಾತ್ತಾಪದ ಸುಳಿವೂ ಇಲ್ಲದೇ ರಾತ್ರಿ ನೆಮ್ಮದಿಯಾಗಿ ನಿದ್ರಿಸುತ್ತಿದ್ದಾನೆ ಎಂದು ಆತನ ಸಹಕೈದಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

22 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

22 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

23 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago