Latest

ಶ್ರದ್ಧಾ ತಲೆಯನ್ನು ಫ್ರಿಜ್ಜಿನಲ್ಲಿಟ್ಟು ಪ್ರತಿದಿನ ನೋಡುತ್ತಿದ್ದ ಸೈಕೋ

ದಿನೇ ದಿನೆ ದೆಹಲಿಯ ಶ್ರದ್ಧಾ ಹತ್ಯೆಯ ಭೀಕರ ವಿವರಗಳು ಬಿಚ್ಚಿಕೊಳ್ಳುತ್ತಿವೆ. ಶ್ರದ್ಧಾ ದೇಹವನ್ನು ಆಕೆಯ ಸೈಕೋ ಪ್ರಿಯಕರ 35 ತುಂಡುಗಳಾಗಿ ಕತ್ತರಿಸಿ ಎಸೆದಿದ್ದು, ಅದರಲ್ಲಿ ಕೆಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇನ್ನೂ ಹಲವಾರು ತುಣುಕುಗಳಿಗಾಗಿ ಹುಡುಕಾಟ ನಡೆದಿದೆ. ಆಕೆಯ ತಲೆ ಇನ್ನೂ ಸಿಕ್ಕಿಲ್ಲ. ಅದು ದೊರೆತರೆ ಅಪರಾಧವನ್ನು ಸಾಕ್ಷೀಕರಿಸುವ ಗುರುತರ ಪುರಾವೆ ಲಭ್ಯವಾದಂತಾಗಲಿದೆ. ತುಣುಕುಗಳನ್ನು ಎಸೆದ ಪ್ರದೇಶಗಳಲ್ಲಿ ಅಫ್ತಾಬ್‌ನನ್ನು ಕರೆದುಕೊಂಡು ಹೋಗಿ ಪೊಲೀಸರು ತಲಾಶೆ ನಡೆಸುತ್ತಿದ್ದಾರೆ.
ಪ್ರತಿದಿನ ರಾತ್ರಿ 2 ಗಂಟೆಗೆ ಹೊರಗೆ ಹೋಗಿ ಶ್ರದ್ಧಾ ದೇಹದ ಒಂದೆರಡು ತುಣುಕನ್ನು ಎಸೆದು ಬರುತ್ತಿದ್ದ ಅಫ್ತಾಬ್‌, ತಲೆಯನ್ನು ಕತ್ತರಿಸಲು ಸಫಲನಾಗಿರಲಿಲ್ಲ. ಹೀಗಾಗಿ ಅದನ್ನು ಫ್ರಿಜ್‌ನಲ್ಲಿಟ್ಟಿದ್ದು. ʼʼಪ್ರತಿದಿನ ಅದನ್ನು ತೆಗೆದು, ನಮ್ಮ ಸಂಬಂಧದ ನೆನಪಿಗಾಗಿ ನೋಡಿಕೊಳ್ಳುತ್ತಿದ್ದೆʼʼ ಎಂದು ಪೊಲೀಸರಿಗೆ ಹೇಳಿದ್ದಾನೆ. ಎಲ್ಲ ತುಣುಕುಗಳನ್ನೂ ಎಸೆದ ಬಳಿಕ ಕೊನೆಯದಾಗಿ ತಲೆಯನ್ನು ಈತ ಬಿಸಾಡಿದ್ದ.
ತಲೆಬುರುಡೆ ದೊರೆತ ಬಳಿಕ ತಲೆಬುರುಡೆಯ ಸೂಪರ್ಇಂಪೊಸಿಷನ್ ತಂತ್ರಜ್ಞಾನ ಮೂಲಕ ಹತ್ಯೆಯಾದವಳ ಗುರುತನ್ನು ರುಜುವಾತುಪಡಿಸಲು ಪೊಲೀಸರಿಗೆ ಸಾಧ್ಯವಾಗಲಿದೆ. ಸದ್ಯ ಪೊಲೀಸರ ಬಳಿ ಇರುವ ಪುರಾವೆ ಎಂದರೆ ದೇಹದ ತುಣುಕುಗಳಿಗೂ ಶ್ರದ್ಧಾ ತಂದೆ ವಿಕಾಸ್‌ ವಾಕರ್‌ಗೂ ಇರುವ ಡಿಎನ್‌ಎ ಹೋಲಿಕೆ ಮಾತ್ರ. ಮೂಳೆಗಳನ್ನು ಡಿಎನ್‌ಎ ಸ್ಯಾಂಪಲಿಂಗ್‌ಗೆ ಕಳಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.
ಕೃತ್ಯ ನಡೆಸಿದ ಬಳಿಕ ಮನೆಯನ್ನು ಕ್ಲೀನ್‌ ಮಾಡಲು, ದೇಹದ ತುಂಡುಗಳನ್ನು ಶೇಖರಿಸಲು ಕೀಚಕ ಅಫ್ತಾಬ್‌ ಬೋರಿಕ್‌ ಪೌಡರ್‌, ಫಾರ್ಮಾಲ್ಡಿಹೈಡ್‌, ಸಲ್ಫ್ಯೂರಿಕ್‌ ಆಮ್ಲ ಮತ್ತಿತರ ಕೆಮಿಕಲ್‌ಗಳನ್ನು ಬಳಸಿದ್ದಾನೆ. ಕೃತ್ಯ ನಡೆದು ಆರು ತಿಂಗಳಾಗಿರುವುದರಿಂದ ಸ್ಥಳ ಮಹಜರಿನಲ್ಲಿ ಗುರುತರ ಸಾಕ್ಷ್ಯಗಳಿಗಾಗಿ ಫಾರೆನ್ಸಿಕ್‌ ತಂಡವನ್ನು ಪೊಲೀಸರು ಅವಲಂಬಿಸಿದ್ದಾರೆ. ಅಫ್ತಾಬ್‌ ಕೂಡ ಕ್ಷಣಕ್ಕೊಂದು ಹೇಳಿಕೆ ನೀಡಿ, ಕೆಲವನ್ನು ಮರೆತುಬಿಟ್ಟಂತೆ ನಟಿಸಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾನೆ.
ಎರಡು ಮೂರು ದಿನಗಳಿಂದ ಪೊಲೀಸ್‌ ಕಸ್ಟಡಿಯಲ್ಲಿರುವ ಅಫ್ತಾಬ್‌, ಹೊಟ್ಟೆ ತುಂಬಾ ಆಹಾರ ಸೇವಿಸಿ ಯಾವುದೇ ಪಶ್ಚಾತ್ತಾಪದ ಸುಳಿವೂ ಇಲ್ಲದೇ ರಾತ್ರಿ ನೆಮ್ಮದಿಯಾಗಿ ನಿದ್ರಿಸುತ್ತಿದ್ದಾನೆ ಎಂದು ಆತನ ಸಹಕೈದಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

25 minutes ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

29 minutes ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

20 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

24 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago