Latest

ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ಪೂರ್ವ ಭಾವಿ ಸಭೆ

ಕೊಟ್ಟೂರು ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನ ಹಿಂಭಾಗದಲ್ಲಿ ಮಂಗಳವಾರ ಪ್ರೆ :16 ರಂದು ರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವ ಭಾವಿ ಸಭೆ ನಡೆಯಿತು .ಈ ಸಭೆ ಉದ್ದೇಶಿಸಿ ಮಾತನಾಡಿದ ಶಾಸಕ ಭೀಮನಾಯ್ಕ್ ಕೊಟ್ಟೂರೇಶ್ವರ ಸ್ವಾಮಿಯ ದರ್ಶನಕ್ಕೆ ನಾಡಿನಾದ್ಯಂತ ಲಕ್ಷಾಂತರ ಭಕ್ತಾದಿಗಳು ಆಗಮಿಸಲಿದ್ದಾರೆ ಭಕ್ತಾದಿಗಳಿಗೆ ಯಾವುದೇ ಅಡಚಣೆಗಳು ಉಂಟಾಗದಂತೆ ಎಲ್ಲ ಮೂಲಭೂತ ಸೌಲಭ್ಯಗಳು ಒದಗಿಸುವ ಜವಾಬ್ದಾರಿ ಪ್ರತಿ ಇಲಾಖೆಯ ಕೆಲಸವಾಗಿದೆ ಎಂದು ಹೇಳಿದರು
ಮುಂದಿನ ದಿನಗಳಲ್ಲಿ ಭಕ್ತಾದಿಗಳಿಗೆ ತಾಣವಾಗಿ ಇರುವ ಸುಮಾರು 10ರಿಂದ 15 ಕೋಟಿ ರೂಪಾಯಿ ವೆಚ್ಚದಲ್ಲಿ ಯಾತ್ರೆ ನಿವಾಸ ನಿರ್ಮಿಸಲಾಗುವುದೆಂದು ಭರವಸೆ ನೀಡಿದರು

“ಅಧಿಕಾರಿಗಳಿಗೆ ಸೂಚನೆ ”
ಸುಮಾರು ಐದು ದಿನಗಳ ಕಾಲ ನಡೆಯುವ ರಥೋತ್ಸವ ವೇಳೆಯಲ್ಲಿ ದೂಳು ನಿಯಂತ್ರಣ , ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ವಿದ್ಯುತ್, ಮತ್ತು ಕುಡಿಯುವ ನೀರು, ವ್ಯತಯ ಆಗದಂತೆ, ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಪಟ್ಟಣ ಪಂಚಾಯಿತಿ, ಜೆಸ್ಕಾಂ ಮತ್ತು ಪೊಲೀಸ್ ಇಲಾಖೆ ಮಾನ್ಯ ಜಿಲ್ಲಾಧಿಕಾರಿ ಟಿ ವೆಂಕಟೇಶ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿ ಮಾತನಾಡಿದರು

ಪಾದಯಾತ್ರೆ ಮಾಡುವ ಭಕ್ತಾದಿಗಳ ಆರೋಗ್ಯಕರ ದೃಷ್ಟಿಯಿಂದ ಚಿಕಿತ್ಸೆಗೆ ಮೂರು ತಾಲೂಕಿನ ಟಿಎಚ್ಒ ಸಭೆ ನಡೆಸಿ ಹೆಚ್ಚುವರಿಯಾಗಿ ವೈದ್ಯರನ್ನು ನೇಮಕ ಮಾಡಬೇಕು ಎಂದರು ಹಾಗೂ ಕೂಡ್ಲಿಗಿ , ಹರಪನಹಳ್ಳಿ, ಚಿರಿಬಿ, ಇಟ್ಟಿಗಿ ರಸ್ತೆ ಮಾರ್ಗವಾಗಿ ಬರುವ ಭಕ್ತಾದಿಗಳಿಗೆ ತಾತ್ಕಾಲಿಕ ಆಸ್ಪತ್ರೆಗಳನ್ನು ತೆರೆಯಬೇಕೆಂದು ವೈದ್ಯಧಿಕಾರಿಗಳಿಗೆ ಸೂಚನೆ ನೀಡಿದರು
ಕೆ ಎಸ್ ಆರ್ ಟಿ ಸಿ 80 ಬಸ್ ಗಳ ವ್ಯವಸ್ಥೆ ಕಲ್ಪಿಸುವಂತೆ ಮತ್ತು 150 ಕೆ.ಜಿ ತೂಕದ ದೇವಸ್ಥಾನದ ಬೆಳ್ಳಿ ಬಾಗಿಲು ನಿರ್ಮಾಣಕ್ಕೆ ಟೆಂಡರ್ ಆದೇಶ ನೀಡಿರುವ ಬಗ್ಗೆ ಹಾಗೂ ದೇವಸ್ಥಾನ ಖಾತೆಯಲ್ಲಿ ಇರುವ 5 ಕೋಟಿ ರೂ. ಹಣದಲ್ಲಿ ದೇವರ ಮೂರ್ತಿಯನ್ನು ವಜ್ರದಲ್ಲಿ ಮತ್ತು ಸುತ್ತಲಿನ ಗದ್ದುಗೆಯನ್ನು,ತೊಟ್ಟಿಲನ್ನು ಬಂಗಾರದ ಪ್ಲೇಟ್ ಅಳವಡಿಸುವಂತೆ ಜಿಲ್ಲಾಧಿಕಾರಿ ಬಳಿ ಚರ್ಚಿಸಿದರು.

ಗಾಂಧಿ ಸರ್ಕಲ್ ನಲ್ಲಿ ಬರುವ ಮುಖ್ಯ ರಸ್ತೆಯನ್ನು ಹಾಗೂ ರೇಣುಕಾ ಟಾಕೀಸ್ ಮುಖ್ಯ ರಸ್ತೆಯಲ್ಲಿ ವಾಹನಗಳು ಒಂದೇ ಮಾರ್ಗವಾಗಿ ಸಂಚಾರಿಸುವಂತೆ ಡಿ. ಶಿವಚರಣ ಮನವಿಗೆ ಶಾಸಕರು ಎಲ್ಲವನ್ನು ಪರಿಶೀಲಿಸಿ ಮಾಡುವುದಾಗಿ ತಿಳಿಸಿದರು

ಕೆಲ ವಾರ್ಡ್ಗಳಲ್ಲಿ ವಿದ್ಯುತ್ ಕಂಬಗಳು ಸರಿಪಡಿಸುವಂತೆ ನಾಗರಾಜ್ ಗೌಡ್ರು ತಿಳಿಸಿದಾಗ ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಜೆಸ್ಕಾಂ ಅಧಿಕಾರಿಗಳಿಗೆ ಸರಿಪಡಿಸುವುದಾಗಿ ತಿಳಿಸಿದರು

ರಥೋತ್ಸವ ಜರಗುವ ತೇರು ಬಯಲು ರಸ್ತೆಯನ್ನು ಭಕ್ತಾದಿಗಳಿಗೆ ಹಾಗೂ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಿಗೆ ಸಮಸ್ಯೆ ಆಗದಂತೆ ನಿರ್ಮಿಸಬೇಕು ಎಂದು ಬದ್ದಿ ಮರಿಸ್ವಾಮಿ ಮನವಿಗೆ ಸ್ಪಂದಿಸುವುದಾಗಿ ಶಾಸಕರು ತಿಳಿಸಿದರು

ಪ್ರಕಾಶ್ ರಾವ್ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರು ನಿರೂಪಿಸಿ ವಂದಿಸಿದರು

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

12 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

14 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

3 days ago