Latest

ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ಪೂರ್ವ ಭಾವಿ ಸಭೆ

ಕೊಟ್ಟೂರು ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನ ಹಿಂಭಾಗದಲ್ಲಿ ಮಂಗಳವಾರ ಪ್ರೆ :16 ರಂದು ರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ವ ಭಾವಿ ಸಭೆ ನಡೆಯಿತು .ಈ ಸಭೆ ಉದ್ದೇಶಿಸಿ ಮಾತನಾಡಿದ ಶಾಸಕ ಭೀಮನಾಯ್ಕ್ ಕೊಟ್ಟೂರೇಶ್ವರ ಸ್ವಾಮಿಯ ದರ್ಶನಕ್ಕೆ ನಾಡಿನಾದ್ಯಂತ ಲಕ್ಷಾಂತರ ಭಕ್ತಾದಿಗಳು ಆಗಮಿಸಲಿದ್ದಾರೆ ಭಕ್ತಾದಿಗಳಿಗೆ ಯಾವುದೇ ಅಡಚಣೆಗಳು ಉಂಟಾಗದಂತೆ ಎಲ್ಲ ಮೂಲಭೂತ ಸೌಲಭ್ಯಗಳು ಒದಗಿಸುವ ಜವಾಬ್ದಾರಿ ಪ್ರತಿ ಇಲಾಖೆಯ ಕೆಲಸವಾಗಿದೆ ಎಂದು ಹೇಳಿದರು
ಮುಂದಿನ ದಿನಗಳಲ್ಲಿ ಭಕ್ತಾದಿಗಳಿಗೆ ತಾಣವಾಗಿ ಇರುವ ಸುಮಾರು 10ರಿಂದ 15 ಕೋಟಿ ರೂಪಾಯಿ ವೆಚ್ಚದಲ್ಲಿ ಯಾತ್ರೆ ನಿವಾಸ ನಿರ್ಮಿಸಲಾಗುವುದೆಂದು ಭರವಸೆ ನೀಡಿದರು

“ಅಧಿಕಾರಿಗಳಿಗೆ ಸೂಚನೆ ”
ಸುಮಾರು ಐದು ದಿನಗಳ ಕಾಲ ನಡೆಯುವ ರಥೋತ್ಸವ ವೇಳೆಯಲ್ಲಿ ದೂಳು ನಿಯಂತ್ರಣ , ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ವಿದ್ಯುತ್, ಮತ್ತು ಕುಡಿಯುವ ನೀರು, ವ್ಯತಯ ಆಗದಂತೆ, ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಪಟ್ಟಣ ಪಂಚಾಯಿತಿ, ಜೆಸ್ಕಾಂ ಮತ್ತು ಪೊಲೀಸ್ ಇಲಾಖೆ ಮಾನ್ಯ ಜಿಲ್ಲಾಧಿಕಾರಿ ಟಿ ವೆಂಕಟೇಶ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿ ಮಾತನಾಡಿದರು

ಪಾದಯಾತ್ರೆ ಮಾಡುವ ಭಕ್ತಾದಿಗಳ ಆರೋಗ್ಯಕರ ದೃಷ್ಟಿಯಿಂದ ಚಿಕಿತ್ಸೆಗೆ ಮೂರು ತಾಲೂಕಿನ ಟಿಎಚ್ಒ ಸಭೆ ನಡೆಸಿ ಹೆಚ್ಚುವರಿಯಾಗಿ ವೈದ್ಯರನ್ನು ನೇಮಕ ಮಾಡಬೇಕು ಎಂದರು ಹಾಗೂ ಕೂಡ್ಲಿಗಿ , ಹರಪನಹಳ್ಳಿ, ಚಿರಿಬಿ, ಇಟ್ಟಿಗಿ ರಸ್ತೆ ಮಾರ್ಗವಾಗಿ ಬರುವ ಭಕ್ತಾದಿಗಳಿಗೆ ತಾತ್ಕಾಲಿಕ ಆಸ್ಪತ್ರೆಗಳನ್ನು ತೆರೆಯಬೇಕೆಂದು ವೈದ್ಯಧಿಕಾರಿಗಳಿಗೆ ಸೂಚನೆ ನೀಡಿದರು
ಕೆ ಎಸ್ ಆರ್ ಟಿ ಸಿ 80 ಬಸ್ ಗಳ ವ್ಯವಸ್ಥೆ ಕಲ್ಪಿಸುವಂತೆ ಮತ್ತು 150 ಕೆ.ಜಿ ತೂಕದ ದೇವಸ್ಥಾನದ ಬೆಳ್ಳಿ ಬಾಗಿಲು ನಿರ್ಮಾಣಕ್ಕೆ ಟೆಂಡರ್ ಆದೇಶ ನೀಡಿರುವ ಬಗ್ಗೆ ಹಾಗೂ ದೇವಸ್ಥಾನ ಖಾತೆಯಲ್ಲಿ ಇರುವ 5 ಕೋಟಿ ರೂ. ಹಣದಲ್ಲಿ ದೇವರ ಮೂರ್ತಿಯನ್ನು ವಜ್ರದಲ್ಲಿ ಮತ್ತು ಸುತ್ತಲಿನ ಗದ್ದುಗೆಯನ್ನು,ತೊಟ್ಟಿಲನ್ನು ಬಂಗಾರದ ಪ್ಲೇಟ್ ಅಳವಡಿಸುವಂತೆ ಜಿಲ್ಲಾಧಿಕಾರಿ ಬಳಿ ಚರ್ಚಿಸಿದರು.

ಗಾಂಧಿ ಸರ್ಕಲ್ ನಲ್ಲಿ ಬರುವ ಮುಖ್ಯ ರಸ್ತೆಯನ್ನು ಹಾಗೂ ರೇಣುಕಾ ಟಾಕೀಸ್ ಮುಖ್ಯ ರಸ್ತೆಯಲ್ಲಿ ವಾಹನಗಳು ಒಂದೇ ಮಾರ್ಗವಾಗಿ ಸಂಚಾರಿಸುವಂತೆ ಡಿ. ಶಿವಚರಣ ಮನವಿಗೆ ಶಾಸಕರು ಎಲ್ಲವನ್ನು ಪರಿಶೀಲಿಸಿ ಮಾಡುವುದಾಗಿ ತಿಳಿಸಿದರು

ಕೆಲ ವಾರ್ಡ್ಗಳಲ್ಲಿ ವಿದ್ಯುತ್ ಕಂಬಗಳು ಸರಿಪಡಿಸುವಂತೆ ನಾಗರಾಜ್ ಗೌಡ್ರು ತಿಳಿಸಿದಾಗ ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಜೆಸ್ಕಾಂ ಅಧಿಕಾರಿಗಳಿಗೆ ಸರಿಪಡಿಸುವುದಾಗಿ ತಿಳಿಸಿದರು

ರಥೋತ್ಸವ ಜರಗುವ ತೇರು ಬಯಲು ರಸ್ತೆಯನ್ನು ಭಕ್ತಾದಿಗಳಿಗೆ ಹಾಗೂ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಿಗೆ ಸಮಸ್ಯೆ ಆಗದಂತೆ ನಿರ್ಮಿಸಬೇಕು ಎಂದು ಬದ್ದಿ ಮರಿಸ್ವಾಮಿ ಮನವಿಗೆ ಸ್ಪಂದಿಸುವುದಾಗಿ ಶಾಸಕರು ತಿಳಿಸಿದರು

ಪ್ರಕಾಶ್ ರಾವ್ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರು ನಿರೂಪಿಸಿ ವಂದಿಸಿದರು

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago