Latest

ಸಿದ್ದಾಪುರ: ಶೇಡಿಮನೆ ಹೊಳೆ ಮರಳು ಕಳ್ಳತನ – 3 ಟಿಪ್ಪರ್‌ ವಶ

ಸಿದ್ದಾಪುರ ತಾಲೂಕಿನ ಶೇಡಿಮನೆ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆಯುವ ಕಾರ್ಯಕ್ಕೆ ಶಂಕರನಾರಾಯಣ ಪೊಲೀಸರು ಶನಿವಾರ ಮುಂಜಾನೆ ತಡೆ ಹಾಕಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಗಳು ಹೊಳೆಯಿಂದ ಮರಳನ್ನು ಅಕ್ರಮವಾಗಿ ತೆಗೆದು, ಮೂರು ಟಿಪ್ಪರ್‌ ಲಾರಿಗಳಲ್ಲಿ ತುಂಬಿ ಕುಳ್ಳುಂಜೆ ಗ್ರಾಮದ ಬಾಕುಡೆ ಪ್ರದೇಶದಲ್ಲಿ ಇಟ್ಟಿದ್ದರು. ಖಚಿತ ಮಾಹಿತಿಯ ಆಧಾರದ ಮೇಲೆ ಪಿಎಸ್‌ಐ ಯೂನೂಸ್‌ ಆರ್‌. ಗಡ್ಡೇಕರ್‌ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ, ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದುಕೊಂಡಿದೆ.

ಈ ಪ್ರಕರಣದಲ್ಲಿ ಚರಣ್‌, ಮಹೇಶ್‌ ಹಾಗೂ ಸುಧೀರ್‌ ಎಂಬ ಮೂವರು ವಿರುದ್ಧ ಮರಳು ಕಳ್ಳತನದ ಆರೋಪ ದಾಖಲಿಸಲಾಗಿದೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

10 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

12 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

23 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

24 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

24 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago