Categories: CrimeLatest

ಮಗ ತನ್ನಂತಿಲ್ಲವೆಂದು ಕೊಂದೇ ಬಿಟ್ಟ ಪಾಪಿ ತಂದೆ: ವಿಜಯಪುರದಲ್ಲಿ ಅಮಾನವೀಯ ಘಟನೆ..!

ವಿಜಯಪುರ ಜಿಲ್ಲೆಯಲ್ಲಿ ಮಾನವೀಯತೆಯನ್ನು ಕಳೆದುಹೋಗುವಂತೆ ಮಾಡುವ ಕ್ರೂರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತನ್ನ ಮಗನು ತನ್ನಂತಿಲ್ಲ ಎಂಬ ಅಸಂಬದ್ಧ ಕಾರಣಕ್ಕೆ ತಂದೆಯೇ ಆರು ವರ್ಷದ ಮಗುವನ್ನು ಹತ್ಯೆ ಮಾಡಿರುವ ಘಟನೆ ಸಮಾಜವನ್ನು ಬೆಚ್ಚಿಬೀಳಿಸಿದೆ.

ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಹತ್ಯೆಗೆ ಗುರಿಯಾದ ಬಾಲಕನಾಗಿದ್ದಾನೆ. ಈ ಪ್ರಕರಣದಲ್ಲಿ ಬಾಲಕನ ತಂದೆ ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಆರೋಪಿ.

ಮಾರ್ಚ್ 16ರಂದು ಮಗನನ್ನು ಶಾಲೆಗೆ ಸೇರಿಸುವ ನೆಪದಲ್ಲಿ ಕರೆದುಕೊಂಡು ಹೋದ ಮಲ್ಲಿಕಾರ್ಜುನ, ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿ ಸಮೀಪದ ಕೃಷ್ಣಾ ನದಿಗೆ ಕರೆದುಕೊಂಡು ಹೋಗಿ, ನದಿಗೆ ತಳ್ಳುವ ಮೂಲಕ ಹತ್ಯೆಗೈದಿದ್ದಾನೆ.

ಗ್ರಾಮದಲ್ಲಿ “ಮಗ ನಿನ್ನಂತಿಲ್ಲ” ಎಂದು ಕೆಲವರು ಹಾಸ್ಯ ಮಾಡುತ್ತಿದ್ದುದನ್ನು ಗಂಭೀರವಾಗಿ ತೆಗೆದುಕೊಂಡ ಮಲ್ಲಿಕಾರ್ಜುನ, ತನ್ನದೇ ಮಗನ ವಿರುದ್ಧ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಘಟನೆ ನಂತರ, ಮಗನನ್ನು ಸಿಂದಗಿ ಬಳಿ ಇರುವ ಶಾಲೆಯಲ್ಲಿ ಹಾಸ್ಟೆಲ್‌ಗೆ ಸೇರಿಸಿದ್ದಾಗಿ ಕುಟುಂಬಸ್ಥರಿಗೆ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದ. ಆದರೆ ಏಪ್ರಿಲ್ 1ರಂದು ಮಗನ ಹುಟ್ಟುಹಬ್ಬದಂದು ಮನೆಗೆ ಕರೆದುಕೊಂಡು ಬರಬೇಕೆಂದು ತಾಯಿ ಭಾಗ್ಯಶ್ರೀ ಒತ್ತಾಯಿಸಿದ್ದಳು. ಈ ವೇಳೆ ಮಲ್ಲಿಕಾರ್ಜುನ ಮನೆಯಿಂದ ಪರಾರಿಯಾದುದು ಅನುಮಾನಕ್ಕೆ ಕಾರಣವಾಯಿತು.

ತಕ್ಷಣವೇ ತಾಯಿ ಭಾಗ್ಯಶ್ರೀ ಪೊಲೀಸರಿಗೆ ದೂರು ನೀಡಿದ್ದಳು. ನಂತರ ಪೊಲೀಸರು ನಡೆಸಿದ ವಿಚಾರಣೆಯಲ್ಲಿ ಮಲ್ಲಿಕಾರ್ಜುನ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

ಈ ಘಟನೆ ತಂದೆ-ಮಗ ಸಂಬಂಧದ ಮೇಲೆಯೇ ಪ್ರಶ್ನೆ ಹುಟ್ಟಿಸುವಂತಿದ್ದು, ಸಮಾಜದಲ್ಲಿ ಸಂವೇದನೆ ಮತ್ತು ಮೌಲ್ಯಗಳ ಕುಸಿತವನ್ನು ಸ್ಪಷ್ಟಪಡಿಸುತ್ತದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago